Categories: ಕೋಲಾರ

ಸಿರಿಧಾನ್ಯ ಬೆಳೆಗಳಿಗೆ ಸರ್ಕಾರದ ಪೋತ್ಸಾಹವನ್ನು ಸದುಪಯೋಗಪಡಿಸಿಕೊಳ್ಳಿ: ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ

ಕೋಲಾರ: ಸಿರಿಧಾನ್ಯ ಉತ್ಪನ್ನಗಳನ್ನು ಬೆಳೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆಯುವಂತಾಗಬೇಕು ಎಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ತಿಳಿಸಿದರು.

ನಗರದ ಟೇಕಲ್ ರಸ್ತೆಯಲ್ಲಿ ಶನಿವಾರ ಅಂತರಗಂಗೆ ಸಿರಿಧಾನ್ಯ ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಸಿರಿಧಾನ್ಯ ಉಪಯೋಗದ ಮಹತ್ವ ಕುರಿತಾದ ಉಪನ್ಯಾಸವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯಗಳ ಬೆಳೆಯಲು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುತ್ತಾ ಇದೆ. ರೈತರಿಂದ ರೈತರಿಗಾಗಿ ಎನ್ನುವ ಉದ್ದೇಶದಿಂದ ಸರ್ಕಾರಗಳು ಪೋತ್ಸಾಹಿಸಲಾಗುತ್ತಾ ಇದ್ದು, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ರೈತರಲ್ಲಿ ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಸಹ ಮೂಡಿಸಲಾಗುತ್ತಾ ಇದೆ. ಸರಕಾರದಿಂದ ನೀಡುವ ಸೌಲಭ್ಯಗಳನ್ನು ಪಡೆದು ಗುಣಮಟ್ಟದ ಪರಿಕರಗಳನ್ನು ಬಳಸಿ ಉತ್ಪಾದನೆ ಮಾಡಿ ಮಾದರಿಯ ರೈತರಾಗಬೇಕಾಗಿದೆ ಎಂದರು.

ದೇಶದ ಪ್ರತಿಯೊಬ್ಬ ಮನುಷ್ಯನ ಆರೋಗ್ಯದ ದೃಷ್ಟಿಯಿಂದ ಸಿರಿಧಾನ್ಯಗಳನ್ನೇ ಬಳಸುವಂತಾಗಬೇಕು ಇದರಿಂದಾಗಿಯೇ ಆರೋಗ್ಯವು ವೃದ್ಧಿಯಾಗುತ್ತದೆ ಜೊತೆಗೆ ಅನ್ನದಾತರಿಗೆ ಹೆಚ್ಚಿನ ಪ್ರಮಾಣದಲ್ಲಿ ಆದಾಯವು ಸಿಗಲಿದೆ ಹೊರ ದೇಶದಲ್ಲಿ ಸಹ ಹೆಚ್ಚಿನ ಸಿರಿಧಾನ್ಯಕ್ಕೆ  ಬೇಡಿಕೆ ಇದೆ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಬೆಳೆಗಳನ್ನು ಬೆಳೆಯಬೇಕು ಇದಕ್ಕೆ ಇಲಾಖೆಯ ಸಂಪೂರ್ಣ ಸಹಕಾರ ಇದ್ದೇ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಬೀಜ ನಿಗಮದ ನಿರ್ದೇಶಕ ಡಿ.ಎಲ್ ನಾಗರಾಜ್ ಮಾತನಾಡಿ, ಸಿರಿಧಾನ್ಯಗಳನ್ನು ಸುಮಾರು 50 ವರ್ಷಗಳ ಹಿಂದೆಯೇ ಬೆಳೆಯುತ್ತಾ ಇದ್ದರು ಆದರೆ ಅ ದಿನಗಳಲ್ಲಿ ಬಡವರ ಆಹಾರವಾಗಿತ್ತು ಇವತ್ತು ಶ್ರೀಮಂತರ ಆಹಾರವಾಗಿದೆ ಅಷ್ಟೇ ವ್ಯತ್ಯಾಸ ಇವತ್ತು ರೈತರು ಬೆಳೆಯುವ ಪ್ರತಿಯೊಂದು ಬೆಳೆಗೂ ರಸಾಯನಿಕ ಗೊಬ್ಬರಗಳ ತರಕಾರಿಗಳಿಂದ ಆರೋಗ್ಯ ಕೆಟ್ಟಿದೆ ನಮ್ಮ  ಮುಂದಿನ ಭವಿಷ್ಯಕ್ಕಾಗಿ ಸಿರಿಧಾನ್ಯಗಳನ್ನು ಬೆಳೆದು ಅದನ್ನು ಉತ್ತೇಜಿಸುವಂತಾಗಬೇಕು ಎಂದರು

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಪರಮೇಶ್, ಎಪಿ ಮಾಸ್ ಯೋಜನಾ ನಿರ್ದೇಶಕ ವಿನಾಯಕ ರೆಡ್ಡಿ, ಅಮರನಾರಾಯಣ ತೋಟಗಾರಿಕೆ ಸಂಸ್ಥೆಯ ಈರಪ್ಪರೆಡ್ಡಿ, ರೇಷ್ಮೆ ಉತ್ಪಾದಕರ ಸಂಸ್ಥೆಯ ಶಂಕರರೆಡ್ಡಿ, ಅಂತರಗಂಗ ಸಿರಿಧಾನ್ಯ ಸಂಸ್ಥೆಯ ಅಧ್ಯಕ್ಷ ಕೀರ್ತಿ ನಾರಾಯಣ, ಉಪಾಧ್ಯಕ್ಷ ನಂದೀಶ್ವರ್, ನಿರ್ದೇಶಕರಾದ ಜನಪನಹಳ್ಳಿ ಆನಂದ್, ಮಣಿ, ರೂಪಶ್ರೀ, ಹರೀಶ್, ಪುಟ್ಟಮ್ಮ, ಸತೀಶ್, ಸೌಂದರ್ಯ, ಮುಂತಾದವರು ಇದ್ದರು

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago