Categories: ಕೋಲಾರ

ಸಿರಿಧಾನ್ಯ ಬೆಳೆಗಳಿಗೆ ಸರ್ಕಾರದ ಪೋತ್ಸಾಹವನ್ನು ಸದುಪಯೋಗಪಡಿಸಿಕೊಳ್ಳಿ: ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ

ಕೋಲಾರ: ಸಿರಿಧಾನ್ಯ ಉತ್ಪನ್ನಗಳನ್ನು ಬೆಳೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆಯುವಂತಾಗಬೇಕು ಎಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ತಿಳಿಸಿದರು.

ನಗರದ ಟೇಕಲ್ ರಸ್ತೆಯಲ್ಲಿ ಶನಿವಾರ ಅಂತರಗಂಗೆ ಸಿರಿಧಾನ್ಯ ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಸಿರಿಧಾನ್ಯ ಉಪಯೋಗದ ಮಹತ್ವ ಕುರಿತಾದ ಉಪನ್ಯಾಸವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯಗಳ ಬೆಳೆಯಲು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುತ್ತಾ ಇದೆ. ರೈತರಿಂದ ರೈತರಿಗಾಗಿ ಎನ್ನುವ ಉದ್ದೇಶದಿಂದ ಸರ್ಕಾರಗಳು ಪೋತ್ಸಾಹಿಸಲಾಗುತ್ತಾ ಇದ್ದು, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ರೈತರಲ್ಲಿ ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಸಹ ಮೂಡಿಸಲಾಗುತ್ತಾ ಇದೆ. ಸರಕಾರದಿಂದ ನೀಡುವ ಸೌಲಭ್ಯಗಳನ್ನು ಪಡೆದು ಗುಣಮಟ್ಟದ ಪರಿಕರಗಳನ್ನು ಬಳಸಿ ಉತ್ಪಾದನೆ ಮಾಡಿ ಮಾದರಿಯ ರೈತರಾಗಬೇಕಾಗಿದೆ ಎಂದರು.

ದೇಶದ ಪ್ರತಿಯೊಬ್ಬ ಮನುಷ್ಯನ ಆರೋಗ್ಯದ ದೃಷ್ಟಿಯಿಂದ ಸಿರಿಧಾನ್ಯಗಳನ್ನೇ ಬಳಸುವಂತಾಗಬೇಕು ಇದರಿಂದಾಗಿಯೇ ಆರೋಗ್ಯವು ವೃದ್ಧಿಯಾಗುತ್ತದೆ ಜೊತೆಗೆ ಅನ್ನದಾತರಿಗೆ ಹೆಚ್ಚಿನ ಪ್ರಮಾಣದಲ್ಲಿ ಆದಾಯವು ಸಿಗಲಿದೆ ಹೊರ ದೇಶದಲ್ಲಿ ಸಹ ಹೆಚ್ಚಿನ ಸಿರಿಧಾನ್ಯಕ್ಕೆ  ಬೇಡಿಕೆ ಇದೆ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಬೆಳೆಗಳನ್ನು ಬೆಳೆಯಬೇಕು ಇದಕ್ಕೆ ಇಲಾಖೆಯ ಸಂಪೂರ್ಣ ಸಹಕಾರ ಇದ್ದೇ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಬೀಜ ನಿಗಮದ ನಿರ್ದೇಶಕ ಡಿ.ಎಲ್ ನಾಗರಾಜ್ ಮಾತನಾಡಿ, ಸಿರಿಧಾನ್ಯಗಳನ್ನು ಸುಮಾರು 50 ವರ್ಷಗಳ ಹಿಂದೆಯೇ ಬೆಳೆಯುತ್ತಾ ಇದ್ದರು ಆದರೆ ಅ ದಿನಗಳಲ್ಲಿ ಬಡವರ ಆಹಾರವಾಗಿತ್ತು ಇವತ್ತು ಶ್ರೀಮಂತರ ಆಹಾರವಾಗಿದೆ ಅಷ್ಟೇ ವ್ಯತ್ಯಾಸ ಇವತ್ತು ರೈತರು ಬೆಳೆಯುವ ಪ್ರತಿಯೊಂದು ಬೆಳೆಗೂ ರಸಾಯನಿಕ ಗೊಬ್ಬರಗಳ ತರಕಾರಿಗಳಿಂದ ಆರೋಗ್ಯ ಕೆಟ್ಟಿದೆ ನಮ್ಮ  ಮುಂದಿನ ಭವಿಷ್ಯಕ್ಕಾಗಿ ಸಿರಿಧಾನ್ಯಗಳನ್ನು ಬೆಳೆದು ಅದನ್ನು ಉತ್ತೇಜಿಸುವಂತಾಗಬೇಕು ಎಂದರು

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಪರಮೇಶ್, ಎಪಿ ಮಾಸ್ ಯೋಜನಾ ನಿರ್ದೇಶಕ ವಿನಾಯಕ ರೆಡ್ಡಿ, ಅಮರನಾರಾಯಣ ತೋಟಗಾರಿಕೆ ಸಂಸ್ಥೆಯ ಈರಪ್ಪರೆಡ್ಡಿ, ರೇಷ್ಮೆ ಉತ್ಪಾದಕರ ಸಂಸ್ಥೆಯ ಶಂಕರರೆಡ್ಡಿ, ಅಂತರಗಂಗ ಸಿರಿಧಾನ್ಯ ಸಂಸ್ಥೆಯ ಅಧ್ಯಕ್ಷ ಕೀರ್ತಿ ನಾರಾಯಣ, ಉಪಾಧ್ಯಕ್ಷ ನಂದೀಶ್ವರ್, ನಿರ್ದೇಶಕರಾದ ಜನಪನಹಳ್ಳಿ ಆನಂದ್, ಮಣಿ, ರೂಪಶ್ರೀ, ಹರೀಶ್, ಪುಟ್ಟಮ್ಮ, ಸತೀಶ್, ಸೌಂದರ್ಯ, ಮುಂತಾದವರು ಇದ್ದರು

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

6 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

10 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago