ಸಿರಿ (ನ್ಯೂಟ್ರಿ) ಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

ಸಿರಿಧಾನ್ಯಗಳು ಮನುಕುಲಕ್ಕೆ ತಿಳಿದಿರುವ ಅತ್ಯಂತ ಪುರಾತನ ಆಹಾರವಾಗಿದ್ದು ಕಡಿಮೆ ನೀರು ಉಪಯೋಗಿಸಿ, ರಾಸಾಯನಿಕ ಗೊಬ್ಬರವಿಲ್ಲದೆ ಬರಡು ಭೂಮಿಯಲ್ಲೂ ಸಹಜವಾಗಿ ಬೆಳೆಯುವ ಮತ್ತು ಬೇಗ ಕಟಾವಿಗೆ ಬರುವ ಬೆಳೆಗಳಾಗಿವೆ. ಆದ್ದರಿಂದ ಇವುಗಳನ್ನು ‘ಬರಗಾಲದ ಮಿತ್ರ’ ಎಂದೂ ಸಹ ಕರೆಯಲಾಗುತ್ತದೆ. ಭಾರತವು ಸೇರಿದಂತೆ ವಿಶ್ವದ ಅರೆ ಒಣ ಪ್ರದೇಶದಲ್ಲಿ ಸಿರಿ ಧಾನ್ಯಗಳನ್ನು ಆಹಾರ ಮತ್ತು ಮೇವು ಬೆಳೆಗಳಾಗಿ ಬೆಳೆಯಲಾಗುತ್ತಿದ್ದು, ಶತಕೋಟಿಗೂ ಹೆಚ್ಚಿನ ಜನರಿಗೆ ಆಹಾರದ ಶಕ್ತಿ ಮತ್ತು ಸಾರಜನಕದ ಮೂಲವಾಗಿದೆ. ಪ್ರಪಂಚದಾದ್ಯಂತ ಇವುಗಳ ಮಹತ್ವ ತಿಳಿಸಲು 2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಲಾಗಿದೆ.

ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ

ಸಿರಿಧಾನ್ಯಗಳ ಸಂಸ್ಕರಣೆಯಲ್ಲಿ ಪ್ರಮುಖವಾಗಿ ಧಾನ್ಯಗಳನ್ನು ಮೂಲ ಬೀಜ, ಪಿಷ್ಠವಿರುವ ಎಂಡೋಸ್ಪರ್ಮ್ ಮತ್ತು ರಕ್ಷಣಾ ಪದರ ಎಂದು ಮೂರು ಘಟಕಗಳಾಗಿ ಪರಿವರ್ತಿಸಲಾಗುತ್ತದೆ. ಸಿರಿಧಾನ್ಯಗಳ ಸಾಂಪ್ರದಾಯಿಕ ಸಂಸ್ಕರಣೆ ವಿಧಾನಗಳು ತುಂಬಾ ಪ್ರಯಾಸಕರ ಮತ್ತು ಹಸ್ತ ಚಾಲಿತವಾಗಿದ್ದು ಮಾನವ ಶ್ರಮ ಹಾಗೂ ಖರ್ಚು ವೆಚ್ಚವನ್ನು ಹೆಚ್ಚಿಸುತ್ತವೆ ಮತ್ತು ಕಡಿಮೆ ಗುಣಮಟ್ಟದ ಉತ್ಪನ್ನಗಳನ್ನು ಕೊಡುತ್ತವೆ.

ಸಿರಿಧಾನ್ಯಗಳ ಸಂಸ್ಕರಣಾ ಹಂತಗಳು
1. ಪ್ರಾಥಮಿಕ ಹಂತ
2. ದ್ವಿತೀಯ ಹಂತ

1. ಪ್ರಾಥಮಿಕ ಹಂತದ ಸಂಸ್ಕರಣೆ

ಧಾನ್ಯಗಳಲ್ಲಿರುವ ಕಲ್ಮಶ, ಕಸ, ಕಡ್ಡಿ ಇತರೆ ಕಳೆ ಬೀಜ ಮತ್ತು ಕಾಳಿನ ಹೊಟ್ಟು ತೆಗೆದು ಹಾಕುವ ಪ್ರಕ್ರಿಯೆಯನ್ನು ಪ್ರಾಥಮಿಕ ಸಂಸ್ಕರಣೆ ಎಂದು ಕರೆಯಲಾಗುತ್ತದೆ. ಹೀಗೆ ಸ್ವಚ್ಛಗೊಳಿದ ಧಾನ್ಯಗಳು ದ್ವಿತೀಯ ಸಂಸ್ಕರಣೆ ಮಾಡಲು ಅನುಕೂಲಕರವಾಗಿರುತ್ತವೆ. ಪ್ರಾಥಮಿಕ ಸಂಸ್ಕರಣೆಯಲ್ಲಿರುವ ಕಾರ್ಯ ವಿಧಾನಗಳೆಂದರೆ ವರ್ಗೀಕರಣ (ಗ್ರೇಡಿಂಗ್), ಕಲ್ಲು ತೆಗೆಯುವುದು (ಡಿ-ಸ್ಟೋನಿಂಗ್), ಹೊಟ್ಟು ತೆಗೆಯುವುದು (ಡಿ-ಹಲ್ಲಿಂಗ್).

2. ದ್ವಿತೀಯ ಹಂತದ ಸಂಸ್ಕರಣೆ
ಪ್ರಾಥಮಿಕ ಸಂಸ್ಕರಣೆ ಮಾಡಿದ ಕಚ್ಛಾ‌ ವಸ್ತುಗಳನ್ನು ತಿನ್ನಲು ಸಿದ್ಧ ವಸ್ತುಗಳನ್ನಾಗಿ ಪರಿವರ್ತಿಸುವ ಕ್ರಿಯೆಯನ್ನು ದ್ವಿತೀಯ ಸಂಸ್ಕರಣೆ ಎನ್ನುತ್ತಾರೆ. ಉದಾಹರಣೆಗೆ ಅಡುಗೆ ಮಾಡಲು ತಯಾರಿರುವ ಉತ್ಪನ್ನಗಳು ರೆಡಿ ಟು ಕಿಕ್ ಮತ್ತು ತಿನ್ನಲು ಸಿದ್ಧವಿರುವ ಪದಾರ್ಥಗಳು.

ಸಿರಿಧಾನ್ಯಗಳು ಪೋಷಕಾಂಶದಲ್ಲಿ ಶ್ರೇಷ್ಠವಾಗಿದ್ದರೂ ಸಹ ಅದರ ಬಳಕೆ ಮಾರುಕಟ್ಟೆಯಲ್ಲಿ ಕ್ರಮೇಣ ಇಳಿಮುಖವಾಗಿದೆ. ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ಮೂಲಕ ನಗರ ಪ್ರದೇಶದಲ್ಲಿ ಅವುಗಳ ಬಳಕೆಯನ್ನು ಹೆಚ್ಚಿಸಬಹುದು. ಪ್ರಾಥಮಿಕವಾಗಿ ಮೌಲ್ಯವರ್ಧನೆಯು ಸಿರಿಧಾನ್ಯಗಳ ಬೇಡಿಕೆ ಮತ್ತು ಬಳಕೆಯನ್ನು ಹೆಚ್ಚಿಸುತ್ತದೆ. ಕಿರಿಧಾನ್ಯಗಳನ್ನು ಸಾಂಪ್ರದಾಯಿಕ ಉತ್ಪನ್ನಗಳು, ಪಾಸ್ತಾ ಉತ್ಪನ್ನಗಳು, ಬೇಕರಿ ಉತ್ಪನ್ನಗಳು ಮತ್ತು ತ್ವರಿತ ಆಹಾರ ಮಿಶ್ರಣಗಳ ತಯಾರಿಕೆಯಲ್ಲಿ ಬಳಸಬಹುದಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರವನ್ನು ಸಂಪರ್ಕಿಸಿ.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

3 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

4 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

6 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

9 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago