ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ. ಇದರೊಂದಿಗೆ ಇಡೀ ದೇಶ ನಿಟ್ಟುಸಿರು ಬಿಡುವಂತಾಗಿದೆ. 41 ಜನರ ಪ್ರಾಣ ರಕ್ಷಣೆಗಾಗಿ ಸತತ 400 ಗಂಟೆಗಳಿಂದ ಹಗಲಿರುಳೂ ಶ್ರಮಿಸಿದ ರಕ್ಷಣಾ ತಂಡದ ಛಲ, ಮಹತ್ತರದ ಸಾಧನೆಗೆ ದೇಶದ ಜನರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಕಾರ್ಮಿಕರ ಕುಟುಂಬಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಏನಿದು ಸಿಲ್ಕ್ಯಾರಾ ಸುರಂಗ
ಕೇಂದ್ರ ಸರ್ಕಾರದ ಪ್ರತಿಷ್ಠಿತ ಚಾರ್ ಧಾಮ್ ಯೋಜನೆಯ ಭಾಗವೇ ಈ 4.5 ಕಿ.ಮೀ. ಉದ್ದದ ಸಿಲ್ಕ್ಯಾರಾದ ಸುರಂಗ. ಉತ್ತರಾಖಂಡ– ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಿಲ್ಕ್ಯಾರಾ ಸುರಂಗ ಎಂದೇ ಕರೆಯಲಾಗುವ ಈ ರಸ್ತೆ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಂಡಿತು.
ನ. 12ರಂದು ಸಿಲ್ಕ್ಯಾರಾ ಕಡೆಯ ಸುರಂಗದಲ್ಲಿನ 205 ಹಾಗೂ 260 ಮೀಟರ್ ಅಂತರದಲ್ಲಿ ಸುರಂಗ ಕುಸಿಯಿತು. 260 ಮೀಟರ್ ಕಡೆ ಇರುವ ಕಾರ್ಮಿಕರು ಸುರಂಗದೊಳಗೆ ಸಿಲುಕಿದರು. ಹೀಗಾಗಿ ಅವರು ಹೊರಬರಲು ಅವಕಾಶವೇ ಇಲ್ಲವಾಯಿತು. ಆದರೆ ಇವರು ಸಿಲುಕಿರುವ ಪ್ರದೇಶದಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಇತ್ತು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…