ಸಿಲ್ಕ್ಯಾರಾ ಸುರಂಗದಲ್ಲಿ17 ದಿನಗಳಿಂದ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಣೆ: ಸಿಹಿ ಹಂಚಿ‌ ಸಂಭ್ರಮಿಸಿದ‌ ಸ್ಥಳೀಯರು: ರಕ್ಷಣಾ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ ದೇಶದ ಜನ

ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ. ಇದರೊಂದಿಗೆ ಇಡೀ ದೇಶ ನಿಟ್ಟುಸಿರು ಬಿಡುವಂತಾಗಿದೆ. 41 ಜನರ ಪ್ರಾಣ ರಕ್ಷಣೆಗಾಗಿ ಸತತ 400 ಗಂಟೆಗಳಿಂದ ಹಗಲಿರುಳೂ ಶ್ರಮಿಸಿದ ರಕ್ಷಣಾ ತಂಡದ ಛಲ, ಮಹತ್ತರದ ಸಾಧನೆಗೆ ದೇಶದ ಜನರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಕಾರ್ಮಿಕರ ಕುಟುಂಬಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

4 ಅಡಿಗಳಷ್ಟು ಅಗಲದ ಕಿರು ಸುರಂಗದ ಮೂಲಕ ಪೈಪ್‌ಗಳನ್ನು ಅಳವಡಿಸಿ, ಎಲ್ಲಾಕಾರ್ಮಿಕರನ್ನು ಒಬ್ಬೊಬ್ಬರಾಗಿ ಹೊರಗೆಳೆಯಲಾಯಿತು.

ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡದ ಸಾಧನೆಯನ್ನು ಕೊಂಡಾಡಿದ‌ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರು.

ಏನಿದು ಸಿಲ್ಕ್ಯಾರಾ ಸುರಂಗ

ಕೇಂದ್ರ ಸರ್ಕಾರದ ಪ್ರತಿಷ್ಠಿತ ಚಾರ್‌ ಧಾಮ್‌ ಯೋಜನೆಯ ಭಾಗವೇ ಈ 4.5 ಕಿ.ಮೀ. ಉದ್ದದ ಸಿಲ್ಕ್ಯಾರಾದ ಸುರಂಗ. ಉತ್ತರಾಖಂಡ– ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಿಲ್ಕ್ಯಾರಾ ಸುರಂಗ ಎಂದೇ ಕರೆಯಲಾಗುವ ಈ ರಸ್ತೆ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಂಡಿತು.

ಈ ಸುರಂಗವು ಸಿಲ್ಕ್ಯಾರಾದಿಂದ ದಾಂಡಲಗಾಂವ್‌ಗೆ ಸಂಪರ್ಕ ಕಲ್ಪಿಸಲಿದೆ. ಎರಡು ಲೇನ್‌ ಹೊಂದಿರುವ ಇದು ಚಾರ್‌ಧಾಮ್‌ ಯೋಜನೆಯಲ್ಲಿ ಅತ್ಯಂತ ಉದ್ದನೆಯ ಸುರಂಗವಾಗಿದೆ. ಸದ್ಯ ಸಿಲ್ಕ್ಯಾರಾದ ಕಡೆಯಿಂದ 2.4 ಕಿ.ಮೀ. ಹಾಗೂ ಮತ್ತೊಂದು ಬದಿಯಿಂದ 1.75 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಕಾಮಗಾರಿ ಪೂರ್ಣಗೊಂಡಲ್ಲಿ ಸುಮಾರು ಒಂದು ಗಂಟೆಯ ಪ್ರಯಾಣ ಅವಧಿ ಕಡಿತಗೊಳ್ಳಲಿದೆ. ಈ ಸುರಂಗದ ಕಾಮಗಾರಿಯನ್ನು ಹೈದರಾಬಾದ್ ಮೂಲದ ನವಯುಗ್ ಎಂಜಿನಿಯರಿಂಗ್ ಕಂಪನಿ ವಹಿಸಿಕೊಂಡಿದೆ.

ನ. 12ರಂದು ಸಿಲ್ಕ್ಯಾರಾ ಕಡೆಯ ಸುರಂಗದಲ್ಲಿನ 205 ಹಾಗೂ 260 ಮೀಟರ್‌ ಅಂತರದಲ್ಲಿ ಸುರಂಗ ಕುಸಿಯಿತು. 260 ಮೀಟರ್‌ ಕಡೆ ಇರುವ ಕಾರ್ಮಿಕರು ಸುರಂಗದೊಳಗೆ ಸಿಲುಕಿದರು. ಹೀಗಾಗಿ ಅವರು ಹೊರಬರಲು ಅವಕಾಶವೇ ಇಲ್ಲವಾಯಿತು. ಆದರೆ ಇವರು ಸಿಲುಕಿರುವ ಪ್ರದೇಶದಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಇತ್ತು.‌

ಸುರಂಗ ಕುಸಿತ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹಿಮಾಲಯದ ಈ ಪ್ರದೇಶದಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಈ ಸಮಸ್ಯೆ ಎದುರಾಯಿತು ಎಂದು ಕೆಲವರು ಹೇಳುತ್ತಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಆತುರದಲ್ಲಿ ಕೈಗೊಂಡ ಕಾಮಗಾರಿಯಿಂದಲೂ ಇಂಥ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂಬ ಮಾತುಗಳೂ ಕೇಳಿಬಂದಿವೆ.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

3 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

11 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

14 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

17 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

18 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

20 hours ago