ಸಿಲ್ಕ್ಯಾರಾ ಸುರಂಗದಲ್ಲಿ17 ದಿನಗಳಿಂದ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಣೆ: ಸಿಹಿ ಹಂಚಿ‌ ಸಂಭ್ರಮಿಸಿದ‌ ಸ್ಥಳೀಯರು: ರಕ್ಷಣಾ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ ದೇಶದ ಜನ

ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ. ಇದರೊಂದಿಗೆ ಇಡೀ ದೇಶ ನಿಟ್ಟುಸಿರು ಬಿಡುವಂತಾಗಿದೆ. 41 ಜನರ ಪ್ರಾಣ ರಕ್ಷಣೆಗಾಗಿ ಸತತ 400 ಗಂಟೆಗಳಿಂದ ಹಗಲಿರುಳೂ ಶ್ರಮಿಸಿದ ರಕ್ಷಣಾ ತಂಡದ ಛಲ, ಮಹತ್ತರದ ಸಾಧನೆಗೆ ದೇಶದ ಜನರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಕಾರ್ಮಿಕರ ಕುಟುಂಬಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

4 ಅಡಿಗಳಷ್ಟು ಅಗಲದ ಕಿರು ಸುರಂಗದ ಮೂಲಕ ಪೈಪ್‌ಗಳನ್ನು ಅಳವಡಿಸಿ, ಎಲ್ಲಾಕಾರ್ಮಿಕರನ್ನು ಒಬ್ಬೊಬ್ಬರಾಗಿ ಹೊರಗೆಳೆಯಲಾಯಿತು.

ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡದ ಸಾಧನೆಯನ್ನು ಕೊಂಡಾಡಿದ‌ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರು.

ಏನಿದು ಸಿಲ್ಕ್ಯಾರಾ ಸುರಂಗ

ಕೇಂದ್ರ ಸರ್ಕಾರದ ಪ್ರತಿಷ್ಠಿತ ಚಾರ್‌ ಧಾಮ್‌ ಯೋಜನೆಯ ಭಾಗವೇ ಈ 4.5 ಕಿ.ಮೀ. ಉದ್ದದ ಸಿಲ್ಕ್ಯಾರಾದ ಸುರಂಗ. ಉತ್ತರಾಖಂಡ– ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಿಲ್ಕ್ಯಾರಾ ಸುರಂಗ ಎಂದೇ ಕರೆಯಲಾಗುವ ಈ ರಸ್ತೆ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಂಡಿತು.

ಈ ಸುರಂಗವು ಸಿಲ್ಕ್ಯಾರಾದಿಂದ ದಾಂಡಲಗಾಂವ್‌ಗೆ ಸಂಪರ್ಕ ಕಲ್ಪಿಸಲಿದೆ. ಎರಡು ಲೇನ್‌ ಹೊಂದಿರುವ ಇದು ಚಾರ್‌ಧಾಮ್‌ ಯೋಜನೆಯಲ್ಲಿ ಅತ್ಯಂತ ಉದ್ದನೆಯ ಸುರಂಗವಾಗಿದೆ. ಸದ್ಯ ಸಿಲ್ಕ್ಯಾರಾದ ಕಡೆಯಿಂದ 2.4 ಕಿ.ಮೀ. ಹಾಗೂ ಮತ್ತೊಂದು ಬದಿಯಿಂದ 1.75 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಕಾಮಗಾರಿ ಪೂರ್ಣಗೊಂಡಲ್ಲಿ ಸುಮಾರು ಒಂದು ಗಂಟೆಯ ಪ್ರಯಾಣ ಅವಧಿ ಕಡಿತಗೊಳ್ಳಲಿದೆ. ಈ ಸುರಂಗದ ಕಾಮಗಾರಿಯನ್ನು ಹೈದರಾಬಾದ್ ಮೂಲದ ನವಯುಗ್ ಎಂಜಿನಿಯರಿಂಗ್ ಕಂಪನಿ ವಹಿಸಿಕೊಂಡಿದೆ.

ನ. 12ರಂದು ಸಿಲ್ಕ್ಯಾರಾ ಕಡೆಯ ಸುರಂಗದಲ್ಲಿನ 205 ಹಾಗೂ 260 ಮೀಟರ್‌ ಅಂತರದಲ್ಲಿ ಸುರಂಗ ಕುಸಿಯಿತು. 260 ಮೀಟರ್‌ ಕಡೆ ಇರುವ ಕಾರ್ಮಿಕರು ಸುರಂಗದೊಳಗೆ ಸಿಲುಕಿದರು. ಹೀಗಾಗಿ ಅವರು ಹೊರಬರಲು ಅವಕಾಶವೇ ಇಲ್ಲವಾಯಿತು. ಆದರೆ ಇವರು ಸಿಲುಕಿರುವ ಪ್ರದೇಶದಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಇತ್ತು.‌

ಸುರಂಗ ಕುಸಿತ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹಿಮಾಲಯದ ಈ ಪ್ರದೇಶದಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಈ ಸಮಸ್ಯೆ ಎದುರಾಯಿತು ಎಂದು ಕೆಲವರು ಹೇಳುತ್ತಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಆತುರದಲ್ಲಿ ಕೈಗೊಂಡ ಕಾಮಗಾರಿಯಿಂದಲೂ ಇಂಥ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂಬ ಮಾತುಗಳೂ ಕೇಳಿಬಂದಿವೆ.

Ramesh Babu

Journalist

Recent Posts

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

3 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

10 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

23 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

23 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

24 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

24 hours ago