ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ. ಇದರೊಂದಿಗೆ ಇಡೀ ದೇಶ ನಿಟ್ಟುಸಿರು ಬಿಡುವಂತಾಗಿದೆ. 41 ಜನರ ಪ್ರಾಣ ರಕ್ಷಣೆಗಾಗಿ ಸತತ 400 ಗಂಟೆಗಳಿಂದ ಹಗಲಿರುಳೂ ಶ್ರಮಿಸಿದ ರಕ್ಷಣಾ ತಂಡದ ಛಲ, ಮಹತ್ತರದ ಸಾಧನೆಗೆ ದೇಶದ ಜನರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಕಾರ್ಮಿಕರ ಕುಟುಂಬಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಏನಿದು ಸಿಲ್ಕ್ಯಾರಾ ಸುರಂಗ
ಕೇಂದ್ರ ಸರ್ಕಾರದ ಪ್ರತಿಷ್ಠಿತ ಚಾರ್ ಧಾಮ್ ಯೋಜನೆಯ ಭಾಗವೇ ಈ 4.5 ಕಿ.ಮೀ. ಉದ್ದದ ಸಿಲ್ಕ್ಯಾರಾದ ಸುರಂಗ. ಉತ್ತರಾಖಂಡ– ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಿಲ್ಕ್ಯಾರಾ ಸುರಂಗ ಎಂದೇ ಕರೆಯಲಾಗುವ ಈ ರಸ್ತೆ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಂಡಿತು.
ನ. 12ರಂದು ಸಿಲ್ಕ್ಯಾರಾ ಕಡೆಯ ಸುರಂಗದಲ್ಲಿನ 205 ಹಾಗೂ 260 ಮೀಟರ್ ಅಂತರದಲ್ಲಿ ಸುರಂಗ ಕುಸಿಯಿತು. 260 ಮೀಟರ್ ಕಡೆ ಇರುವ ಕಾರ್ಮಿಕರು ಸುರಂಗದೊಳಗೆ ಸಿಲುಕಿದರು. ಹೀಗಾಗಿ ಅವರು ಹೊರಬರಲು ಅವಕಾಶವೇ ಇಲ್ಲವಾಯಿತು. ಆದರೆ ಇವರು ಸಿಲುಕಿರುವ ಪ್ರದೇಶದಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಇತ್ತು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…