ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ. ಇದರೊಂದಿಗೆ ಇಡೀ ದೇಶ ನಿಟ್ಟುಸಿರು ಬಿಡುವಂತಾಗಿದೆ. 41 ಜನರ ಪ್ರಾಣ ರಕ್ಷಣೆಗಾಗಿ ಸತತ 400 ಗಂಟೆಗಳಿಂದ ಹಗಲಿರುಳೂ ಶ್ರಮಿಸಿದ ರಕ್ಷಣಾ ತಂಡದ ಛಲ, ಮಹತ್ತರದ ಸಾಧನೆಗೆ ದೇಶದ ಜನರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಕಾರ್ಮಿಕರ ಕುಟುಂಬಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಏನಿದು ಸಿಲ್ಕ್ಯಾರಾ ಸುರಂಗ
ಕೇಂದ್ರ ಸರ್ಕಾರದ ಪ್ರತಿಷ್ಠಿತ ಚಾರ್ ಧಾಮ್ ಯೋಜನೆಯ ಭಾಗವೇ ಈ 4.5 ಕಿ.ಮೀ. ಉದ್ದದ ಸಿಲ್ಕ್ಯಾರಾದ ಸುರಂಗ. ಉತ್ತರಾಖಂಡ– ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಿಲ್ಕ್ಯಾರಾ ಸುರಂಗ ಎಂದೇ ಕರೆಯಲಾಗುವ ಈ ರಸ್ತೆ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಂಡಿತು.
ನ. 12ರಂದು ಸಿಲ್ಕ್ಯಾರಾ ಕಡೆಯ ಸುರಂಗದಲ್ಲಿನ 205 ಹಾಗೂ 260 ಮೀಟರ್ ಅಂತರದಲ್ಲಿ ಸುರಂಗ ಕುಸಿಯಿತು. 260 ಮೀಟರ್ ಕಡೆ ಇರುವ ಕಾರ್ಮಿಕರು ಸುರಂಗದೊಳಗೆ ಸಿಲುಕಿದರು. ಹೀಗಾಗಿ ಅವರು ಹೊರಬರಲು ಅವಕಾಶವೇ ಇಲ್ಲವಾಯಿತು. ಆದರೆ ಇವರು ಸಿಲುಕಿರುವ ಪ್ರದೇಶದಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಇತ್ತು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…