ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ. ಇದರೊಂದಿಗೆ ಇಡೀ ದೇಶ ನಿಟ್ಟುಸಿರು ಬಿಡುವಂತಾಗಿದೆ. 41 ಜನರ ಪ್ರಾಣ ರಕ್ಷಣೆಗಾಗಿ ಸತತ 400 ಗಂಟೆಗಳಿಂದ ಹಗಲಿರುಳೂ ಶ್ರಮಿಸಿದ ರಕ್ಷಣಾ ತಂಡದ ಛಲ, ಮಹತ್ತರದ ಸಾಧನೆಗೆ ದೇಶದ ಜನರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಕಾರ್ಮಿಕರ ಕುಟುಂಬಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಏನಿದು ಸಿಲ್ಕ್ಯಾರಾ ಸುರಂಗ
ಕೇಂದ್ರ ಸರ್ಕಾರದ ಪ್ರತಿಷ್ಠಿತ ಚಾರ್ ಧಾಮ್ ಯೋಜನೆಯ ಭಾಗವೇ ಈ 4.5 ಕಿ.ಮೀ. ಉದ್ದದ ಸಿಲ್ಕ್ಯಾರಾದ ಸುರಂಗ. ಉತ್ತರಾಖಂಡ– ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಿಲ್ಕ್ಯಾರಾ ಸುರಂಗ ಎಂದೇ ಕರೆಯಲಾಗುವ ಈ ರಸ್ತೆ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಂಡಿತು.
ನ. 12ರಂದು ಸಿಲ್ಕ್ಯಾರಾ ಕಡೆಯ ಸುರಂಗದಲ್ಲಿನ 205 ಹಾಗೂ 260 ಮೀಟರ್ ಅಂತರದಲ್ಲಿ ಸುರಂಗ ಕುಸಿಯಿತು. 260 ಮೀಟರ್ ಕಡೆ ಇರುವ ಕಾರ್ಮಿಕರು ಸುರಂಗದೊಳಗೆ ಸಿಲುಕಿದರು. ಹೀಗಾಗಿ ಅವರು ಹೊರಬರಲು ಅವಕಾಶವೇ ಇಲ್ಲವಾಯಿತು. ಆದರೆ ಇವರು ಸಿಲುಕಿರುವ ಪ್ರದೇಶದಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಇತ್ತು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…