ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ. ಇದರೊಂದಿಗೆ ಇಡೀ ದೇಶ ನಿಟ್ಟುಸಿರು ಬಿಡುವಂತಾಗಿದೆ. 41 ಜನರ ಪ್ರಾಣ ರಕ್ಷಣೆಗಾಗಿ ಸತತ 400 ಗಂಟೆಗಳಿಂದ ಹಗಲಿರುಳೂ ಶ್ರಮಿಸಿದ ರಕ್ಷಣಾ ತಂಡದ ಛಲ, ಮಹತ್ತರದ ಸಾಧನೆಗೆ ದೇಶದ ಜನರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಕಾರ್ಮಿಕರ ಕುಟುಂಬಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಏನಿದು ಸಿಲ್ಕ್ಯಾರಾ ಸುರಂಗ
ಕೇಂದ್ರ ಸರ್ಕಾರದ ಪ್ರತಿಷ್ಠಿತ ಚಾರ್ ಧಾಮ್ ಯೋಜನೆಯ ಭಾಗವೇ ಈ 4.5 ಕಿ.ಮೀ. ಉದ್ದದ ಸಿಲ್ಕ್ಯಾರಾದ ಸುರಂಗ. ಉತ್ತರಾಖಂಡ– ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಿಲ್ಕ್ಯಾರಾ ಸುರಂಗ ಎಂದೇ ಕರೆಯಲಾಗುವ ಈ ರಸ್ತೆ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಂಡಿತು.
ನ. 12ರಂದು ಸಿಲ್ಕ್ಯಾರಾ ಕಡೆಯ ಸುರಂಗದಲ್ಲಿನ 205 ಹಾಗೂ 260 ಮೀಟರ್ ಅಂತರದಲ್ಲಿ ಸುರಂಗ ಕುಸಿಯಿತು. 260 ಮೀಟರ್ ಕಡೆ ಇರುವ ಕಾರ್ಮಿಕರು ಸುರಂಗದೊಳಗೆ ಸಿಲುಕಿದರು. ಹೀಗಾಗಿ ಅವರು ಹೊರಬರಲು ಅವಕಾಶವೇ ಇಲ್ಲವಾಯಿತು. ಆದರೆ ಇವರು ಸಿಲುಕಿರುವ ಪ್ರದೇಶದಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಇತ್ತು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…