ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ. ಇದರೊಂದಿಗೆ ಇಡೀ ದೇಶ ನಿಟ್ಟುಸಿರು ಬಿಡುವಂತಾಗಿದೆ. 41 ಜನರ ಪ್ರಾಣ ರಕ್ಷಣೆಗಾಗಿ ಸತತ 400 ಗಂಟೆಗಳಿಂದ ಹಗಲಿರುಳೂ ಶ್ರಮಿಸಿದ ರಕ್ಷಣಾ ತಂಡದ ಛಲ, ಮಹತ್ತರದ ಸಾಧನೆಗೆ ದೇಶದ ಜನರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಕಾರ್ಮಿಕರ ಕುಟುಂಬಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಏನಿದು ಸಿಲ್ಕ್ಯಾರಾ ಸುರಂಗ
ಕೇಂದ್ರ ಸರ್ಕಾರದ ಪ್ರತಿಷ್ಠಿತ ಚಾರ್ ಧಾಮ್ ಯೋಜನೆಯ ಭಾಗವೇ ಈ 4.5 ಕಿ.ಮೀ. ಉದ್ದದ ಸಿಲ್ಕ್ಯಾರಾದ ಸುರಂಗ. ಉತ್ತರಾಖಂಡ– ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಿಲ್ಕ್ಯಾರಾ ಸುರಂಗ ಎಂದೇ ಕರೆಯಲಾಗುವ ಈ ರಸ್ತೆ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಂಡಿತು.
ನ. 12ರಂದು ಸಿಲ್ಕ್ಯಾರಾ ಕಡೆಯ ಸುರಂಗದಲ್ಲಿನ 205 ಹಾಗೂ 260 ಮೀಟರ್ ಅಂತರದಲ್ಲಿ ಸುರಂಗ ಕುಸಿಯಿತು. 260 ಮೀಟರ್ ಕಡೆ ಇರುವ ಕಾರ್ಮಿಕರು ಸುರಂಗದೊಳಗೆ ಸಿಲುಕಿದರು. ಹೀಗಾಗಿ ಅವರು ಹೊರಬರಲು ಅವಕಾಶವೇ ಇಲ್ಲವಾಯಿತು. ಆದರೆ ಇವರು ಸಿಲುಕಿರುವ ಪ್ರದೇಶದಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಇತ್ತು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…