ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ. ಇದರೊಂದಿಗೆ ಇಡೀ ದೇಶ ನಿಟ್ಟುಸಿರು ಬಿಡುವಂತಾಗಿದೆ. 41 ಜನರ ಪ್ರಾಣ ರಕ್ಷಣೆಗಾಗಿ ಸತತ 400 ಗಂಟೆಗಳಿಂದ ಹಗಲಿರುಳೂ ಶ್ರಮಿಸಿದ ರಕ್ಷಣಾ ತಂಡದ ಛಲ, ಮಹತ್ತರದ ಸಾಧನೆಗೆ ದೇಶದ ಜನರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಕಾರ್ಮಿಕರ ಕುಟುಂಬಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಏನಿದು ಸಿಲ್ಕ್ಯಾರಾ ಸುರಂಗ
ಕೇಂದ್ರ ಸರ್ಕಾರದ ಪ್ರತಿಷ್ಠಿತ ಚಾರ್ ಧಾಮ್ ಯೋಜನೆಯ ಭಾಗವೇ ಈ 4.5 ಕಿ.ಮೀ. ಉದ್ದದ ಸಿಲ್ಕ್ಯಾರಾದ ಸುರಂಗ. ಉತ್ತರಾಖಂಡ– ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಿಲ್ಕ್ಯಾರಾ ಸುರಂಗ ಎಂದೇ ಕರೆಯಲಾಗುವ ಈ ರಸ್ತೆ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಂಡಿತು.
ನ. 12ರಂದು ಸಿಲ್ಕ್ಯಾರಾ ಕಡೆಯ ಸುರಂಗದಲ್ಲಿನ 205 ಹಾಗೂ 260 ಮೀಟರ್ ಅಂತರದಲ್ಲಿ ಸುರಂಗ ಕುಸಿಯಿತು. 260 ಮೀಟರ್ ಕಡೆ ಇರುವ ಕಾರ್ಮಿಕರು ಸುರಂಗದೊಳಗೆ ಸಿಲುಕಿದರು. ಹೀಗಾಗಿ ಅವರು ಹೊರಬರಲು ಅವಕಾಶವೇ ಇಲ್ಲವಾಯಿತು. ಆದರೆ ಇವರು ಸಿಲುಕಿರುವ ಪ್ರದೇಶದಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಇತ್ತು.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…