ಸಿಲ್ಕ್ಯಾರಾ ಸುರಂಗದಲ್ಲಿ17 ದಿನಗಳಿಂದ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಣೆ: ಸಿಹಿ ಹಂಚಿ‌ ಸಂಭ್ರಮಿಸಿದ‌ ಸ್ಥಳೀಯರು: ರಕ್ಷಣಾ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ ದೇಶದ ಜನ

ಉತ್ತರಾಖಂಡದ ಉತ್ತರಕಾಶಿ ಸಮೀಪ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡ ಸಂಪೂರ್ಣವಾಗಿ ಯಶಸ್ವಿಗೊಂಡಿದೆ. ಇದರೊಂದಿಗೆ ಇಡೀ ದೇಶ ನಿಟ್ಟುಸಿರು ಬಿಡುವಂತಾಗಿದೆ. 41 ಜನರ ಪ್ರಾಣ ರಕ್ಷಣೆಗಾಗಿ ಸತತ 400 ಗಂಟೆಗಳಿಂದ ಹಗಲಿರುಳೂ ಶ್ರಮಿಸಿದ ರಕ್ಷಣಾ ತಂಡದ ಛಲ, ಮಹತ್ತರದ ಸಾಧನೆಗೆ ದೇಶದ ಜನರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಕಾರ್ಮಿಕರ ಕುಟುಂಬಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

4 ಅಡಿಗಳಷ್ಟು ಅಗಲದ ಕಿರು ಸುರಂಗದ ಮೂಲಕ ಪೈಪ್‌ಗಳನ್ನು ಅಳವಡಿಸಿ, ಎಲ್ಲಾಕಾರ್ಮಿಕರನ್ನು ಒಬ್ಬೊಬ್ಬರಾಗಿ ಹೊರಗೆಳೆಯಲಾಯಿತು.

ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದ್ದ ರಕ್ಷಣಾ ತಂಡದ ಸಾಧನೆಯನ್ನು ಕೊಂಡಾಡಿದ‌ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರು.

ಏನಿದು ಸಿಲ್ಕ್ಯಾರಾ ಸುರಂಗ

ಕೇಂದ್ರ ಸರ್ಕಾರದ ಪ್ರತಿಷ್ಠಿತ ಚಾರ್‌ ಧಾಮ್‌ ಯೋಜನೆಯ ಭಾಗವೇ ಈ 4.5 ಕಿ.ಮೀ. ಉದ್ದದ ಸಿಲ್ಕ್ಯಾರಾದ ಸುರಂಗ. ಉತ್ತರಾಖಂಡ– ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಎಲ್ಲಾ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸಿಲ್ಕ್ಯಾರಾ ಸುರಂಗ ಎಂದೇ ಕರೆಯಲಾಗುವ ಈ ರಸ್ತೆ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಂಡಿತು.

ಈ ಸುರಂಗವು ಸಿಲ್ಕ್ಯಾರಾದಿಂದ ದಾಂಡಲಗಾಂವ್‌ಗೆ ಸಂಪರ್ಕ ಕಲ್ಪಿಸಲಿದೆ. ಎರಡು ಲೇನ್‌ ಹೊಂದಿರುವ ಇದು ಚಾರ್‌ಧಾಮ್‌ ಯೋಜನೆಯಲ್ಲಿ ಅತ್ಯಂತ ಉದ್ದನೆಯ ಸುರಂಗವಾಗಿದೆ. ಸದ್ಯ ಸಿಲ್ಕ್ಯಾರಾದ ಕಡೆಯಿಂದ 2.4 ಕಿ.ಮೀ. ಹಾಗೂ ಮತ್ತೊಂದು ಬದಿಯಿಂದ 1.75 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಕಾಮಗಾರಿ ಪೂರ್ಣಗೊಂಡಲ್ಲಿ ಸುಮಾರು ಒಂದು ಗಂಟೆಯ ಪ್ರಯಾಣ ಅವಧಿ ಕಡಿತಗೊಳ್ಳಲಿದೆ. ಈ ಸುರಂಗದ ಕಾಮಗಾರಿಯನ್ನು ಹೈದರಾಬಾದ್ ಮೂಲದ ನವಯುಗ್ ಎಂಜಿನಿಯರಿಂಗ್ ಕಂಪನಿ ವಹಿಸಿಕೊಂಡಿದೆ.

ನ. 12ರಂದು ಸಿಲ್ಕ್ಯಾರಾ ಕಡೆಯ ಸುರಂಗದಲ್ಲಿನ 205 ಹಾಗೂ 260 ಮೀಟರ್‌ ಅಂತರದಲ್ಲಿ ಸುರಂಗ ಕುಸಿಯಿತು. 260 ಮೀಟರ್‌ ಕಡೆ ಇರುವ ಕಾರ್ಮಿಕರು ಸುರಂಗದೊಳಗೆ ಸಿಲುಕಿದರು. ಹೀಗಾಗಿ ಅವರು ಹೊರಬರಲು ಅವಕಾಶವೇ ಇಲ್ಲವಾಯಿತು. ಆದರೆ ಇವರು ಸಿಲುಕಿರುವ ಪ್ರದೇಶದಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಇತ್ತು.‌

ಸುರಂಗ ಕುಸಿತ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹಿಮಾಲಯದ ಈ ಪ್ರದೇಶದಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಈ ಸಮಸ್ಯೆ ಎದುರಾಯಿತು ಎಂದು ಕೆಲವರು ಹೇಳುತ್ತಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಆತುರದಲ್ಲಿ ಕೈಗೊಂಡ ಕಾಮಗಾರಿಯಿಂದಲೂ ಇಂಥ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂಬ ಮಾತುಗಳೂ ಕೇಳಿಬಂದಿವೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

5 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

9 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

18 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago