ಸಿವಿಲ್ ಪ್ರಕರಣಗಳ ಇತ್ಯರ್ಥಕ್ಕೆ ದಶಕಗಟ್ಟಲೇ ಕಾಯುವ/ವಿಳಂಬಕ್ಕೆ ಮುಕ್ತಿ ನೀಡಲು ದಿಟ್ಟ ಹೆಜ್ಜೆಯನ್ನಿಟ್ಟ ಸರ್ಕಾರ

ಸಿವಿಲ್ ಪ್ರಕರಣಗಳಲ್ಲಾಗುತ್ತಿರುವ ವಿಳಂಬವನ್ನು ಪ್ರಶ್ನಿಸಿ ಶ್ರೀಸಾಮಾನ್ಯರಿಗೆ ನ್ಯಾಯ ಒದಗಿಸುವ ಮಹತ್ವದ ಸಿಪಿಸಿ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಒಂದೆರೆಡು ದಿನಗಳಲ್ಲಿ ಅಧಿಸೂಚನೆ ಪ್ರಕಟವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದ್ದ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಅವರು ಅಂಕಿತ ಹಾಕದೇ ರಾಷ್ಟ್ರಪತಿಯವರಿಗೆ ರವಾನಿಸಿದ್ದರು. ಮೇ 19 ರಂದು ರಾಷ್ಟ್ರಪತಿಯವರು ಅಂಕಿತ ಹಾಕಿದ್ದಾರೆ. ಹೀಗಾಗಿ ಕಾಯ್ದೆ ಜಾರಿಗೆ ಬರಲಿದೆ. ಇನ್ನು ಮುಂದೆ ಸಿವಿಲ್ ಪ್ರಕರಣಗಳ ಇತ್ಯರ್ಥದಲ್ಲಿ ಕ್ರಾಂತಿಕಾರಕ ಪುರೋಗಾಮಿ ಬೆಳವಣಿಗೆಯಾಗಲಿದೆ ಎಂದರು.

ಹೊಸ ನಿಯಮಗಳ ಪ್ರಕಾರ ಸಿವಿಲ್ ಪ್ರಕರಣಗಳಿಗೆ ಆರಂಭದಲ್ಲಿ 2 ತಿಂಗಳ ಕಾಲ ಸಂಧಾನಕ್ಕೆ ಅವಕಾಶ ನೀಡಲಾಗುವುದು. ಅದು ಯಶಸ್ವಿಯಾಗದೇ ಅನಿವಾರ್ಯವಾಗಿ ಪ್ರಕರಣ ದಾಖಲಾದರೆ ಆ ದಿನವೇ ಪ್ರಕರಣದ ವಿಚಾರಣೆ, ಸಾಕ್ಷ್ಯಗಳ ಹಾಜರಿ, ತೀರ್ಪು ಪ್ರಕಟಿಸುವ ದಿನಾಂಕ ಸೇರಿದಂತೆ ಎಲ್ಲದಕ್ಕೂ ವೇಳಾಪಟ್ಟಿ ನಿಗದಿಯಾಗಬೇಕು. ಪ್ರಕರಣ ಇತ್ಯರ್ಥಕ್ಕೆ ಗರಿಷ್ಠ 24 ತಿಂಗಳ ಅವಧಿ ನಿಗದಿಯಾಗಿರುತ್ತದೆ ಎಂದು ಹೇಳಿದರು.

ಒಂದು ವೇಳೆ ಪ್ರತಿವಾದಿ ಸಹಕಾರ ನೀಡದೇ ಇದ್ದರೆ ಅಂತಹ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ನ್ಯಾಯಾಲಯದ ಬಲವನ್ನು ಈ ಕಾಯ್ದೆ ಹೆಚ್ಚಿಸುತ್ತದೆ. ಲಿಖಿತ ಹೇಳಿಕೆ ದಾಖಲಿಸಲು 120 ದಿನಗಳ ಕಾಲಾವಕಾಶವನ್ನು ನೀಡಲಾಗುತ್ತದೆ. ಆ ಅವಧಿಯ ಒಳಗೆ ಲಿಖಿತ ಹೇಳಿಕೆ ದಾಖಲಿಸಲು ಸಹಕರಿಸದಿದ್ದರೆ ಅನಂತರ ಬರುವ ಹೇಳಿಕೆಯನ್ನು ನಿರಾಕರಿಸುವ ಅಧಿಕಾರ ನ್ಯಾಯಾಲಯಕ್ಕಿದೆ. ಈ ಮೂಲಕ ಪ್ರಕರಣಗಳ ನಿರ್ವಹಣೆಯ ವ್ಯವಸ್ಥೆಯನ್ನು ಸಂಪೂರ್ಣ ಪುನ‌ರ್ ವ್ಯಾಖ್ಯಾನ ಮಾಡಲಾಗಿದೆ ಎಂದರು.

ರಾಜ್ಯದ ಕೆಳಹಂತದ ನ್ಯಾಯಾಲಯದಲ್ಲಿ 2023 ರ ವೇಳೆಗೆ 9,37,238 ಪ್ರಕರಣಗಳು ಬಾಕಿ ಇವೆ. ಒಟ್ಟಾರೆ 30.49 ಲಕ್ಷ ಸಿವಿಲ್ ಪ್ರಕರಣಗಳು ಬೇರೆಬೇರೆ ಹಂತದಲ್ಲಿ ಬಾಕಿ ಉಳಿದಿವೆ ಎಂದು ವಿವರಿಸಿದರು.

ಶ್ರೀಸಾಮಾನ್ಯರಿಗೆ ನ್ಯಾಯ ವಿಳಂಬದ ದ್ರೋಹವಾಗುತ್ತಿದೆ. ಇದನ್ನು ತಡೆಯುವುದು ಸರ್ಕಾರದ ಪ್ರಮುಖ ಉದ್ದೇಶ. ಹೀಗಾಗಿ ವಿಧಾನಮಂಡಲದಲ್ಲಿ ಸಿವಿಲ್ ಪ್ರಕ್ರಿಯಾ ಸಂಹಿತೆಗೆ ತಿದ್ದುಪಡಿ ತರುವ ಕ್ರಾಂತಿಕಾರಕ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಇದಕ್ಕೆ ಶಾಸಕಾಂಗ ಸಂಪೂರ್ಣ ಸಹಕಾರ ನೀಡಿದೆ. ನ್ಯಾಯಾಂಗವೂ ಸಹಕಾರ ನೀಡಿ ಕಾಯ್ದೆಯ ಉದ್ದೇಶ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು ಎಂದರು.

ಸಿವಿಲ್‌ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಕೊರತೆಗೂ ಈ ಮಸೂದೆಯ ಜಾರಿಗೂ ಸಂಬಂಧ ಇಲ್ಲ. ನಮ್ಮ ಸರ್ಕಾರ ನೂರಕ್ಕೂ ಹೆಚ್ಚು ಗ್ರಾಮ ನ್ಯಾಯಾಲಯವನ್ನು ಆರಂಭಿಸಿದೆ. 158 ನ್ಯಾಯಾಧೀಶರ 5 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ ಎಂದು ಅವರು ವಿವರಿಸಿದರು.

ಕಾಯ್ದೆಯ ಸಮರ್ಥ ಜಾರಿಯಿಂದ ಶ್ರೀಸಾಮಾನ್ಯ ನ್ಯಾಯಾಲಯಕ್ಕೆ ಅಲೆಯುವುದನ್ನು ತಪ್ಪಿಸುವ ಜೊತೆಗೆ ಆರ್ಥಿಕ ಉಳಿತಾಯಕ್ಕೂ ಅನುಕೂಲವಾಗಲಿದೆ ಎಂದರು.

ಈ ಕಾನೂನಿನಲ್ಲಿ ಪ್ರಕರಣ ನಿರ್ವಹಣೆಯನ್ನು ಪುನರ್ ವ್ಯಾಖ್ಯಾನ ಮಾಡಲಾಗಿದೆ. ಸಾಕ್ಷ್ಯಗಳ ವಿಚಾರಣೆಗಳನ್ನು ನಿಗದಿತ ದಿನಾಂಕದಂದು ಕೈಗೊಳ್ಳಲು ಮತ್ತು ದೈನಂದಿನ ಅಥವಾ ಸಾಪ್ತಾಹಿಕ ಆಧಾರದಲ್ಲಿ ಈ ತಿದ್ದುಪಡಿಗೆ ಅವಕಾಶ ಕಲ್ಪಿಸಿರುವುದರಿಂದ ಯಾವುದೇ ಪ್ರಕರಣ ಅನಿರ್ದಿಷ್ಟಕಾಲ ವಿಳಂಬಕ್ಕೆ ಕಾರಣವಾಗುವುದಿಲ್ಲ. ಆಗದಂತೆ ಸುನಿಶ್ಚಿತಗೊಳಿಸುವ ಜನಪರ ಕಾನೂನು ಅಸ್ತಿತ್ವಕ್ಕೆ ತರಲಾಗಿದೆ. ನ್ಯಾಯದಾನ ವ್ಯವಸ್ಥೆಯನ್ನು ಸಂಪೂರ್ಣವಾಗಿ, ಸುಧಾರಣೆಗೆ ಈ ಕಾನೂನು ಅವಕಾಶ ಕಲ್ಪಿಸಿದೆ. ರಾಜ್ಯದ ಕಕ್ಷಿದಾರರ ನ್ಯಾಯಾಲಯಕ್ಕೆ ವೃಥಾ ಅಲೆದಾಟ ತಪ್ಪಿಸಿ, ಆರ್ಥಿಕವಾಗಿ ಕೈಗೆಟಕುವ ರೀತಿಯಲ್ಲಿ ತ್ವರಿತ ನ್ಯಾಯದಾನ ವ್ಯವಸ್ಥೆಗೆ ಒಂದು ನಿರ್ವಹಣಾ ವ್ಯವಸ್ಥೆಯನ್ನು ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಇಲಾಖೆ ಕಲ್ಪಿಸಿ, ರೂಪಿಸಿ, ಅನುಷ್ಠಾನಗೊಳಿಸಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

8 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

8 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

13 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

17 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

21 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago