ತಾಳಿ ಕಟ್ಟುವ ಶುಭ ವೇಳೆಯಲ್ಲಿ ಏನಾದರೊಂದು ಅನೀರಿಕ್ಷಿತ ತಕರಾರು ಉದ್ಭವಿಸಿ ಕೆಲ ವಿವಾಹಗಳು ರದ್ದಾಗಿರುವ ನಿದರ್ಶನಗಳು ನಡೆದಿವೆ. ಅದೇ ರೀತಿ ಇಲ್ಲೊಂದು ಮದುವೆ ರದ್ದಾಗಿದೆ. ಆದರೆ ಇದಕ್ಕೆ ಕಾರಣವಾಗಿದ್ದು ಯಾವುದೋ ಬಲವಾದ ಕಾರಣವಲ್ಲ. ಹಾಗಾದರೆ ಏನಿದು ಕಾರಣ…?
ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಕೊಡಗಿನ ಸೋಮವಾರಪೇಟೆಯ ಕಲ್ಯಾಣಮಂಟಪವೊಂದರಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿಯ ವಿವಾಹ ತುಮಕೂರು ಜಿಲ್ಲೆಯ ಯುವಕನೋರ್ವನೊಂದಿಗೆ ನಿಶ್ಚಯವಾಗಿದ್ದು, ಮೇ 5ರಂದು ಇಲ್ಲಿನ ಜಾನಕಿ ಕನ್ವೆನ್ಶನ್ ಹಾಲ್ನಲ್ಲಿ ವಿವಾಹ ನಿಗದಿಯಾಗಿತ್ತು.
ಶನಿವಾರ ಸಂಜೆ ತುಮಕೂರಿನಿಂದ ವರನ ಕಡೆಯವರು ಮಂಟಪಕ್ಕೆ ಆಗಮಿಸಿದ್ದು, ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆದು ಗಲಾಟೆ ಆರಂಭವಾಯಿತು. ಮಂಟಪದಲ್ಲಿಯೇ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆಯಿತು. ಮದುವೆಯೇ ಬೇಡ ಎಂದು ವರ ಉಂಗುರವನ್ನೇ ಕಳಚಿಕೊಟ್ಟ.
ರವಿವಾರ ಬೆಳಗ್ಗೆ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತು. ಶನಿವಾರ ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದ ವರ, ರವಿವಾರ ಬೆಳಗ್ಗೆ ನಾನು ಮದುವೆಯಾಗುತ್ತೇನೆ ಎಂದು ಹೊಸ ವರಸೆ ಆರಂಭಿಸಿದ್ದ.
ಆದರೆ ದಿಢೀರ್ ಘಟನಾವಳಿಯಿಂದ ಬೇಸತ್ತ ವಧು ಮದುವೆಯೇ ಬೇಡ ಎಂದು ಪೊಲೀಸರೆದುರು ಹೇಳಿಕೆ ನೀಡಿದಳು. ಹೀಗಾಗಿ ಪೂರ್ವ ನಿಗದಿತ ವಿವಾಹ ಕಾರ್ಯ ಸಿಹಿ ತಿಂಡಿ ವಿಚಾರವಾಗಿ ಮುರಿದು ಬಿತ್ತು.
ಮದುವೆಗೆಂದು ಖರ್ಚು ಮಾಡಿರುವ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಠಾಣೆ ಎದುರು ಆಗ್ರಹಿಸಿದರು. ಅಂತಿಮವಾಗಿ ಹಣಕಾಸಿನ ವಿಚಾರವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿ ಪೊಲೀಸರು ಪ್ರಕರಣಕ್ಕೆ ಇತಿಶ್ರೀ ಹಾಡಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…