Categories: ಕೊಡಗು

ಚಪ್ಪರ ಶಾಸ್ತ್ರದ ಊಟದಲ್ಲಿ ಸಿಹಿತಿಂಡಿ ನೀಡದ್ದಕ್ಕೆ ಮದುವೆ ರದ್ದು..!

ತಾಳಿ ಕಟ್ಟುವ ಶುಭ ವೇಳೆಯಲ್ಲಿ ಏನಾದರೊಂದು ಅನೀರಿಕ್ಷಿತ ತಕರಾರು ಉದ್ಭವಿಸಿ ಕೆಲ ವಿವಾಹಗಳು ರದ್ದಾಗಿರುವ ನಿದರ್ಶನಗಳು ನಡೆದಿವೆ. ಅದೇ ರೀತಿ ಇಲ್ಲೊಂದು ಮದುವೆ ರದ್ದಾಗಿದೆ. ಆದರೆ ಇದಕ್ಕೆ ಕಾರಣವಾಗಿದ್ದು ಯಾವುದೋ ಬಲವಾದ ಕಾರಣವಲ್ಲ. ಹಾಗಾದರೆ ಏನಿದು ಕಾರಣ…?

ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಕೊಡಗಿನ ಸೋಮವಾರಪೇಟೆಯ ಕಲ್ಯಾಣಮಂಟಪವೊಂದರಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿಯ ವಿವಾಹ ತುಮಕೂರು ಜಿಲ್ಲೆಯ ಯುವಕನೋರ್ವನೊಂದಿಗೆ ನಿಶ್ಚಯವಾಗಿದ್ದು, ಮೇ 5ರಂದು ಇಲ್ಲಿನ ಜಾನಕಿ ಕನ್ವೆನ್ಶನ್‌ ಹಾಲ್‌ನಲ್ಲಿ ವಿವಾಹ ನಿಗದಿಯಾಗಿತ್ತು.

ಶನಿವಾರ ಸಂಜೆ ತುಮಕೂರಿನಿಂದ ವರನ ಕಡೆಯವರು ಮಂಟಪಕ್ಕೆ ಆಗಮಿಸಿದ್ದು, ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆದು ಗಲಾಟೆ ಆರಂಭವಾಯಿತು. ಮಂಟಪದಲ್ಲಿಯೇ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆಯಿತು. ಮದುವೆಯೇ ಬೇಡ ಎಂದು ವರ ಉಂಗುರವನ್ನೇ ಕಳಚಿಕೊಟ್ಟ.

ರವಿವಾರ ಬೆಳಗ್ಗೆ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿತು. ಶನಿವಾರ ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದ ವರ, ರವಿವಾರ ಬೆಳಗ್ಗೆ ನಾನು ಮದುವೆಯಾಗುತ್ತೇನೆ ಎಂದು ಹೊಸ ವರಸೆ ಆರಂಭಿಸಿದ್ದ.

ಆದರೆ ದಿಢೀರ್‌ ಘಟನಾವಳಿಯಿಂದ ಬೇಸತ್ತ ವಧು ಮದುವೆಯೇ ಬೇಡ ಎಂದು ಪೊಲೀಸರೆದುರು ಹೇಳಿಕೆ ನೀಡಿದಳು. ಹೀಗಾಗಿ ಪೂರ್ವ ನಿಗದಿತ ವಿವಾಹ ಕಾರ್ಯ ಸಿಹಿ ತಿಂಡಿ ವಿಚಾರವಾಗಿ ಮುರಿದು ಬಿತ್ತು.

ಮದುವೆಗೆಂದು ಖರ್ಚು ಮಾಡಿರುವ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಠಾಣೆ ಎದುರು ಆಗ್ರಹಿಸಿದರು. ಅಂತಿಮವಾಗಿ ಹಣಕಾಸಿನ ವಿಚಾರವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿ ಪೊಲೀಸರು ಪ್ರಕರಣಕ್ಕೆ ಇತಿಶ್ರೀ ಹಾಡಿದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

3 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

11 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

16 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago