Categories: ಕೊಡಗು

ಚಪ್ಪರ ಶಾಸ್ತ್ರದ ಊಟದಲ್ಲಿ ಸಿಹಿತಿಂಡಿ ನೀಡದ್ದಕ್ಕೆ ಮದುವೆ ರದ್ದು..!

ತಾಳಿ ಕಟ್ಟುವ ಶುಭ ವೇಳೆಯಲ್ಲಿ ಏನಾದರೊಂದು ಅನೀರಿಕ್ಷಿತ ತಕರಾರು ಉದ್ಭವಿಸಿ ಕೆಲ ವಿವಾಹಗಳು ರದ್ದಾಗಿರುವ ನಿದರ್ಶನಗಳು ನಡೆದಿವೆ. ಅದೇ ರೀತಿ ಇಲ್ಲೊಂದು ಮದುವೆ ರದ್ದಾಗಿದೆ. ಆದರೆ ಇದಕ್ಕೆ ಕಾರಣವಾಗಿದ್ದು ಯಾವುದೋ ಬಲವಾದ ಕಾರಣವಲ್ಲ. ಹಾಗಾದರೆ ಏನಿದು ಕಾರಣ…?

ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಕೊಡಗಿನ ಸೋಮವಾರಪೇಟೆಯ ಕಲ್ಯಾಣಮಂಟಪವೊಂದರಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿಯ ವಿವಾಹ ತುಮಕೂರು ಜಿಲ್ಲೆಯ ಯುವಕನೋರ್ವನೊಂದಿಗೆ ನಿಶ್ಚಯವಾಗಿದ್ದು, ಮೇ 5ರಂದು ಇಲ್ಲಿನ ಜಾನಕಿ ಕನ್ವೆನ್ಶನ್‌ ಹಾಲ್‌ನಲ್ಲಿ ವಿವಾಹ ನಿಗದಿಯಾಗಿತ್ತು.

ಶನಿವಾರ ಸಂಜೆ ತುಮಕೂರಿನಿಂದ ವರನ ಕಡೆಯವರು ಮಂಟಪಕ್ಕೆ ಆಗಮಿಸಿದ್ದು, ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆದು ಗಲಾಟೆ ಆರಂಭವಾಯಿತು. ಮಂಟಪದಲ್ಲಿಯೇ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆಯಿತು. ಮದುವೆಯೇ ಬೇಡ ಎಂದು ವರ ಉಂಗುರವನ್ನೇ ಕಳಚಿಕೊಟ್ಟ.

ರವಿವಾರ ಬೆಳಗ್ಗೆ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿತು. ಶನಿವಾರ ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದ ವರ, ರವಿವಾರ ಬೆಳಗ್ಗೆ ನಾನು ಮದುವೆಯಾಗುತ್ತೇನೆ ಎಂದು ಹೊಸ ವರಸೆ ಆರಂಭಿಸಿದ್ದ.

ಆದರೆ ದಿಢೀರ್‌ ಘಟನಾವಳಿಯಿಂದ ಬೇಸತ್ತ ವಧು ಮದುವೆಯೇ ಬೇಡ ಎಂದು ಪೊಲೀಸರೆದುರು ಹೇಳಿಕೆ ನೀಡಿದಳು. ಹೀಗಾಗಿ ಪೂರ್ವ ನಿಗದಿತ ವಿವಾಹ ಕಾರ್ಯ ಸಿಹಿ ತಿಂಡಿ ವಿಚಾರವಾಗಿ ಮುರಿದು ಬಿತ್ತು.

ಮದುವೆಗೆಂದು ಖರ್ಚು ಮಾಡಿರುವ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಠಾಣೆ ಎದುರು ಆಗ್ರಹಿಸಿದರು. ಅಂತಿಮವಾಗಿ ಹಣಕಾಸಿನ ವಿಚಾರವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿ ಪೊಲೀಸರು ಪ್ರಕರಣಕ್ಕೆ ಇತಿಶ್ರೀ ಹಾಡಿದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

3 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

6 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago