Categories: ಕೊಡಗು

ಚಪ್ಪರ ಶಾಸ್ತ್ರದ ಊಟದಲ್ಲಿ ಸಿಹಿತಿಂಡಿ ನೀಡದ್ದಕ್ಕೆ ಮದುವೆ ರದ್ದು..!

ತಾಳಿ ಕಟ್ಟುವ ಶುಭ ವೇಳೆಯಲ್ಲಿ ಏನಾದರೊಂದು ಅನೀರಿಕ್ಷಿತ ತಕರಾರು ಉದ್ಭವಿಸಿ ಕೆಲ ವಿವಾಹಗಳು ರದ್ದಾಗಿರುವ ನಿದರ್ಶನಗಳು ನಡೆದಿವೆ. ಅದೇ ರೀತಿ ಇಲ್ಲೊಂದು ಮದುವೆ ರದ್ದಾಗಿದೆ. ಆದರೆ ಇದಕ್ಕೆ ಕಾರಣವಾಗಿದ್ದು ಯಾವುದೋ ಬಲವಾದ ಕಾರಣವಲ್ಲ. ಹಾಗಾದರೆ ಏನಿದು ಕಾರಣ…?

ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಕೊಡಗಿನ ಸೋಮವಾರಪೇಟೆಯ ಕಲ್ಯಾಣಮಂಟಪವೊಂದರಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿಯ ವಿವಾಹ ತುಮಕೂರು ಜಿಲ್ಲೆಯ ಯುವಕನೋರ್ವನೊಂದಿಗೆ ನಿಶ್ಚಯವಾಗಿದ್ದು, ಮೇ 5ರಂದು ಇಲ್ಲಿನ ಜಾನಕಿ ಕನ್ವೆನ್ಶನ್‌ ಹಾಲ್‌ನಲ್ಲಿ ವಿವಾಹ ನಿಗದಿಯಾಗಿತ್ತು.

ಶನಿವಾರ ಸಂಜೆ ತುಮಕೂರಿನಿಂದ ವರನ ಕಡೆಯವರು ಮಂಟಪಕ್ಕೆ ಆಗಮಿಸಿದ್ದು, ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆದು ಗಲಾಟೆ ಆರಂಭವಾಯಿತು. ಮಂಟಪದಲ್ಲಿಯೇ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆಯಿತು. ಮದುವೆಯೇ ಬೇಡ ಎಂದು ವರ ಉಂಗುರವನ್ನೇ ಕಳಚಿಕೊಟ್ಟ.

ರವಿವಾರ ಬೆಳಗ್ಗೆ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿತು. ಶನಿವಾರ ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದ ವರ, ರವಿವಾರ ಬೆಳಗ್ಗೆ ನಾನು ಮದುವೆಯಾಗುತ್ತೇನೆ ಎಂದು ಹೊಸ ವರಸೆ ಆರಂಭಿಸಿದ್ದ.

ಆದರೆ ದಿಢೀರ್‌ ಘಟನಾವಳಿಯಿಂದ ಬೇಸತ್ತ ವಧು ಮದುವೆಯೇ ಬೇಡ ಎಂದು ಪೊಲೀಸರೆದುರು ಹೇಳಿಕೆ ನೀಡಿದಳು. ಹೀಗಾಗಿ ಪೂರ್ವ ನಿಗದಿತ ವಿವಾಹ ಕಾರ್ಯ ಸಿಹಿ ತಿಂಡಿ ವಿಚಾರವಾಗಿ ಮುರಿದು ಬಿತ್ತು.

ಮದುವೆಗೆಂದು ಖರ್ಚು ಮಾಡಿರುವ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಠಾಣೆ ಎದುರು ಆಗ್ರಹಿಸಿದರು. ಅಂತಿಮವಾಗಿ ಹಣಕಾಸಿನ ವಿಚಾರವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿ ಪೊಲೀಸರು ಪ್ರಕರಣಕ್ಕೆ ಇತಿಶ್ರೀ ಹಾಡಿದರು.

Ramesh Babu

Journalist

Recent Posts

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

16 minutes ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

44 minutes ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

4 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

7 hours ago

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…

19 hours ago

ಬೈಕ್ ಗೆ ಕಾರು ಡಿಕ್ಕಿ: ಹಲವರಿಗೆ ಗಂಭೀರ ಗಾಯ

ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ‌‌ ನಡೆದಿದೆ..…

21 hours ago