ಸಿ.ಎಸ್. ಆರ್ ಅನುದಾನದಡಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ

ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳನ್ನು ಸಿ.ಎಸ್.ಆರ್ (ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನದಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು, ಆರಂಭಿಕ ಹಂತದಲ್ಲಿ ದೇವನಹಳ್ಳಿ ತಾಲ್ಲೂಕಿನ 05 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಅಕ್ಟೋಬರ್ 02 ರಂದು ಚಾಲನೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಸಿ.ಎಸ್. ಅರ್ ಅನುದಾನದಡಿಯಲ್ಲಿ ಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಜಿಲ್ಲೆಯ ಕೈಗಾರಿಕೆಗಳು, ವಿವಿಧ ಕಂಪನಿಗಳ ಸಹಯೋಗದಿಂದ ಸಿ.ಎಸ್. ಆರ್ ನಿಧಿಯಡಿಯಲ್ಲಿ ಪ್ರತಿಯೊಂದು ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಗುಣಮಟ್ಟದ ಶಿಕ್ಷಣಕ್ಕೆ ಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಶಾಲೆಗಳಿಗೆ ಒದಗಿಸಲಾಗುವುದು. ಅಕ್ಟೋಬರ್ 02 ರಂದು ಗಾಂಧಿ ಜಯಂತಿ ದಿನ ದೇವನಹಳ್ಳಿ ತಾಲ್ಲೂಕಿನ 05 ಸರ್ಕಾರಿ ಶಾಲೆಗಳ ನವೀಕರಣಕ್ಕೆ ಚಾಲನೆ ನೀಡಲಾಗುವುದು.

ಮುಂದಿನ ದಿನಗಳಲ್ಲಿ ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ ತಾಲ್ಲೂಕಿನ ಕೈಗಾರಿಕೆಗಳು ಹಾಗೂ ಕಂಪನಿಗಳ ಸಭೆ ನಡೆಸಿ ಸಿ.ಎಸ್‌.ಆರ್ ಅನುದಾನದಡಿಯಲ್ಲಿ ಆಯಾ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳನ್ನು ಹಂತಹಂತವಾಗಿ ಅಭಿವೃದ್ಧಿ ಪಡಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಮಾತನಾಡಿ ಬ್ರಿಗೇಡ್ ಡೆವಲಪರ್ಸ್, ಪ್ರೆಸ್ಟೀಜ್ ಕಂಪನಿ,ಚಾಣಕ್ಯ ಯುನಿವರ್ಸಿಟಿ, ಎಕ್ಸೈಡ್ ಕಂಪನಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಗಳ ಅಂದಾಜು 10 ಕೋಟಿ ಸಿ.ಎಸ್.ಆರ್ ನಿಧಿಯಲ್ಲಿ 05 ಶಾಲೆಗಳ ನವೀಕರಣಕ್ಕೆ ಅಕ್ಟೋಬರ್ 02 ರಂದು ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಶಾಲೆ ಆವರಣದಲ್ಲಿ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ಅವರು ಮಾತನಾಡಿ ಜಿಲ್ಲೆಯಲ್ಲಿ 1114 ಶಾಲೆಗಳಿದ್ದು, 115 ಶಿಥಿಲಗೊಂಡಿವೆ, 247 ಹೊಸ ಶಾಲೆಗಳ ನಿರ್ಮಾಣವಾಗಬೇಕು, ಇರುವ ಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸುವುದು , ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಂದಾಜು 70 ಕೋಟಿ ಅವಶ್ಯಕತೆ ಇದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago