Categories: ಕೋಲಾರ

ಸಿ.ಬೈರೇಗೌಡ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ

ಕೊಲಾರ: ನಗರದ ಹೊರವಲಯದ ಸಿ.ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸೃಜನಾತ್ಮಕತೆಯನ್ನು ಎತ್ತಿ ಹಿಡಿದ ವಾರ್ಷಿಕ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ ನಡೆಯಿತು.

ಈ ಕಾರ್ಯಕ್ರಮದಲ್ಲಿ ಇ.ಸಿ, ಸಿ.ಎಸ್, ಎ.ಐ.ಎಂ.ಎಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪ್ರಾಯೋಗಿಕ ಜ್ಞಾನವನ್ನು ಆಧಾರವಾಗಿಸಿಕೊಂಡು ವಿನ್ಯಾಸಗೊಳಿಸಿದ ಆಧುನಿಕ ತಂತ್ರಜ್ಞಾನ ಆಧಾರಿತ ಆಕರ್ಷಕ ಯೋಜನೆಗಳನ್ನು ಪ್ರದರ್ಶಿಸಿದರು.

ಈ ಪ್ರದರ್ಶನದಲ್ಲಿ ಅರೋಗ್ಯ, ಕೃಷಿ, ಭದ್ರತೆ, ಸ್ವಚ್ಛತೆ, ಮಿಲಿಟರಿ ಮುಂತಾದ ಕ್ಷೇತ್ರಗಳ ವಿಷಯಾಧಾರಿತ ನವೀನ ಆವಿಷ್ಕಾರಗಳು ಗಮನ ಸೆಳೆದವು.
ಪ್ರದರ್ಶನವನ್ನು ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಎನ್. ಚಂದ್ರಶೇಖರ ಉದ್ಘಾಟಿಸಿ, “ಪ್ರತಿಯೊಂದು ಯೋಜನೆಯಲ್ಲೂ ವಿದ್ಯಾರ್ಥಿಗಳ ಶ್ರಮ, ಕ್ರಿಯಾತ್ಮಕ ಚಿಂತನೆ ಮತ್ತು ನವೀನತೆಯ ಸ್ಪಷ್ಟ ಪ್ರತಿಬಿಂಬ ಇದೆ.
ನಿಮ್ಮೆಲ್ಲರ ಶ್ರಮ, ಸೃಜನಾತ್ಮಕತೆ, ಅಧ್ಯಾಪರುಗಳ ಮಾರ್ಗದರ್ಶನ ಮತ್ತು ತಂಡದ ಒಗ್ಗಟ್ಟಿನಿಂದ ಇಂತಹ ಸಾಧನೆಗಳು ಆವಿಷ್ಕಾರಗೊಂಡಿವೆ ಹಾಗು ಇಂತ ಕಾರ್ಯ ಸಾಧನೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉದ್ಯೋಗಾವಕಾಶ ನೀಡುತ್ತವೆ” ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿವತಿಯಿಂದ
ಆಕರ್ಷಕ ಹಾಗೂ ಆಧುನಿಕ ತಂತ್ರಜ್ಞಾನ ಆಧಾರಿತ ಅತ್ಯುತ್ತಮ ಪ್ರಾಜೆಕ್ಟ್ ಗಳಿಗೆ ಬಹುಮಾನ ನೀಡಿ ವಿದ್ಯಾರ್ಥಿಗಳನ್ನು ಪ್ರಶಂಸಿಸಲಾಯಿತು.

ಈ ತಾಂತ್ರಿಕ ಮೇಳದಲ್ಲಿ ಪೋಷಕರು, ಅಧ್ಯಾಪಕರು ಮತ್ತು ಇತರ ವಿದ್ಯಾರ್ಥಿಗಳು ಪಾಲ್ಗೊಂಡು ಅದೊಂದು “ಸಾಧನಾ ಸಮಾವೇಶ” ಎಂಬುದಕ್ಕೆ ಸಾಕ್ಷಿಯಾದರು

Ramesh Babu

Journalist

Recent Posts

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

3 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

4 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

6 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

6 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

7 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

9 hours ago