Categories: ಕೋಲಾರ

ಸಿ.ಬೈರೇಗೌಡ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ

ಕೊಲಾರ: ನಗರದ ಹೊರವಲಯದ ಸಿ.ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸೃಜನಾತ್ಮಕತೆಯನ್ನು ಎತ್ತಿ ಹಿಡಿದ ವಾರ್ಷಿಕ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ ನಡೆಯಿತು.

ಈ ಕಾರ್ಯಕ್ರಮದಲ್ಲಿ ಇ.ಸಿ, ಸಿ.ಎಸ್, ಎ.ಐ.ಎಂ.ಎಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪ್ರಾಯೋಗಿಕ ಜ್ಞಾನವನ್ನು ಆಧಾರವಾಗಿಸಿಕೊಂಡು ವಿನ್ಯಾಸಗೊಳಿಸಿದ ಆಧುನಿಕ ತಂತ್ರಜ್ಞಾನ ಆಧಾರಿತ ಆಕರ್ಷಕ ಯೋಜನೆಗಳನ್ನು ಪ್ರದರ್ಶಿಸಿದರು.

ಈ ಪ್ರದರ್ಶನದಲ್ಲಿ ಅರೋಗ್ಯ, ಕೃಷಿ, ಭದ್ರತೆ, ಸ್ವಚ್ಛತೆ, ಮಿಲಿಟರಿ ಮುಂತಾದ ಕ್ಷೇತ್ರಗಳ ವಿಷಯಾಧಾರಿತ ನವೀನ ಆವಿಷ್ಕಾರಗಳು ಗಮನ ಸೆಳೆದವು.
ಪ್ರದರ್ಶನವನ್ನು ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಎನ್. ಚಂದ್ರಶೇಖರ ಉದ್ಘಾಟಿಸಿ, “ಪ್ರತಿಯೊಂದು ಯೋಜನೆಯಲ್ಲೂ ವಿದ್ಯಾರ್ಥಿಗಳ ಶ್ರಮ, ಕ್ರಿಯಾತ್ಮಕ ಚಿಂತನೆ ಮತ್ತು ನವೀನತೆಯ ಸ್ಪಷ್ಟ ಪ್ರತಿಬಿಂಬ ಇದೆ.
ನಿಮ್ಮೆಲ್ಲರ ಶ್ರಮ, ಸೃಜನಾತ್ಮಕತೆ, ಅಧ್ಯಾಪರುಗಳ ಮಾರ್ಗದರ್ಶನ ಮತ್ತು ತಂಡದ ಒಗ್ಗಟ್ಟಿನಿಂದ ಇಂತಹ ಸಾಧನೆಗಳು ಆವಿಷ್ಕಾರಗೊಂಡಿವೆ ಹಾಗು ಇಂತ ಕಾರ್ಯ ಸಾಧನೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉದ್ಯೋಗಾವಕಾಶ ನೀಡುತ್ತವೆ” ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿವತಿಯಿಂದ
ಆಕರ್ಷಕ ಹಾಗೂ ಆಧುನಿಕ ತಂತ್ರಜ್ಞಾನ ಆಧಾರಿತ ಅತ್ಯುತ್ತಮ ಪ್ರಾಜೆಕ್ಟ್ ಗಳಿಗೆ ಬಹುಮಾನ ನೀಡಿ ವಿದ್ಯಾರ್ಥಿಗಳನ್ನು ಪ್ರಶಂಸಿಸಲಾಯಿತು.

ಈ ತಾಂತ್ರಿಕ ಮೇಳದಲ್ಲಿ ಪೋಷಕರು, ಅಧ್ಯಾಪಕರು ಮತ್ತು ಇತರ ವಿದ್ಯಾರ್ಥಿಗಳು ಪಾಲ್ಗೊಂಡು ಅದೊಂದು “ಸಾಧನಾ ಸಮಾವೇಶ” ಎಂಬುದಕ್ಕೆ ಸಾಕ್ಷಿಯಾದರು

Ramesh Babu

Journalist

Recent Posts

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

1 hour ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

2 hours ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

4 hours ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

15 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

16 hours ago