ಕೊಲಾರ: ನಗರದ ಹೊರವಲಯದ ಸಿ.ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸೃಜನಾತ್ಮಕತೆಯನ್ನು ಎತ್ತಿ ಹಿಡಿದ ವಾರ್ಷಿಕ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ ನಡೆಯಿತು.
ಈ ಕಾರ್ಯಕ್ರಮದಲ್ಲಿ ಇ.ಸಿ, ಸಿ.ಎಸ್, ಎ.ಐ.ಎಂ.ಎಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪ್ರಾಯೋಗಿಕ ಜ್ಞಾನವನ್ನು ಆಧಾರವಾಗಿಸಿಕೊಂಡು ವಿನ್ಯಾಸಗೊಳಿಸಿದ ಆಧುನಿಕ ತಂತ್ರಜ್ಞಾನ ಆಧಾರಿತ ಆಕರ್ಷಕ ಯೋಜನೆಗಳನ್ನು ಪ್ರದರ್ಶಿಸಿದರು.
ಈ ಪ್ರದರ್ಶನದಲ್ಲಿ ಅರೋಗ್ಯ, ಕೃಷಿ, ಭದ್ರತೆ, ಸ್ವಚ್ಛತೆ, ಮಿಲಿಟರಿ ಮುಂತಾದ ಕ್ಷೇತ್ರಗಳ ವಿಷಯಾಧಾರಿತ ನವೀನ ಆವಿಷ್ಕಾರಗಳು ಗಮನ ಸೆಳೆದವು.
ಪ್ರದರ್ಶನವನ್ನು ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಎನ್. ಚಂದ್ರಶೇಖರ ಉದ್ಘಾಟಿಸಿ, “ಪ್ರತಿಯೊಂದು ಯೋಜನೆಯಲ್ಲೂ ವಿದ್ಯಾರ್ಥಿಗಳ ಶ್ರಮ, ಕ್ರಿಯಾತ್ಮಕ ಚಿಂತನೆ ಮತ್ತು ನವೀನತೆಯ ಸ್ಪಷ್ಟ ಪ್ರತಿಬಿಂಬ ಇದೆ.
ನಿಮ್ಮೆಲ್ಲರ ಶ್ರಮ, ಸೃಜನಾತ್ಮಕತೆ, ಅಧ್ಯಾಪರುಗಳ ಮಾರ್ಗದರ್ಶನ ಮತ್ತು ತಂಡದ ಒಗ್ಗಟ್ಟಿನಿಂದ ಇಂತಹ ಸಾಧನೆಗಳು ಆವಿಷ್ಕಾರಗೊಂಡಿವೆ ಹಾಗು ಇಂತ ಕಾರ್ಯ ಸಾಧನೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉದ್ಯೋಗಾವಕಾಶ ನೀಡುತ್ತವೆ” ಎಂದು ಹೇಳಿದರು.
ಕಾಲೇಜಿನ ಆಡಳಿತ ಮಂಡಳಿವತಿಯಿಂದ
ಆಕರ್ಷಕ ಹಾಗೂ ಆಧುನಿಕ ತಂತ್ರಜ್ಞಾನ ಆಧಾರಿತ ಅತ್ಯುತ್ತಮ ಪ್ರಾಜೆಕ್ಟ್ ಗಳಿಗೆ ಬಹುಮಾನ ನೀಡಿ ವಿದ್ಯಾರ್ಥಿಗಳನ್ನು ಪ್ರಶಂಸಿಸಲಾಯಿತು.
ಈ ತಾಂತ್ರಿಕ ಮೇಳದಲ್ಲಿ ಪೋಷಕರು, ಅಧ್ಯಾಪಕರು ಮತ್ತು ಇತರ ವಿದ್ಯಾರ್ಥಿಗಳು ಪಾಲ್ಗೊಂಡು ಅದೊಂದು “ಸಾಧನಾ ಸಮಾವೇಶ” ಎಂಬುದಕ್ಕೆ ಸಾಕ್ಷಿಯಾದರು
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…