ಕೊಲಾರ: ನಗರದ ಹೊರವಲಯದ ಸಿ.ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸೃಜನಾತ್ಮಕತೆಯನ್ನು ಎತ್ತಿ ಹಿಡಿದ ವಾರ್ಷಿಕ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ ನಡೆಯಿತು.
ಈ ಕಾರ್ಯಕ್ರಮದಲ್ಲಿ ಇ.ಸಿ, ಸಿ.ಎಸ್, ಎ.ಐ.ಎಂ.ಎಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪ್ರಾಯೋಗಿಕ ಜ್ಞಾನವನ್ನು ಆಧಾರವಾಗಿಸಿಕೊಂಡು ವಿನ್ಯಾಸಗೊಳಿಸಿದ ಆಧುನಿಕ ತಂತ್ರಜ್ಞಾನ ಆಧಾರಿತ ಆಕರ್ಷಕ ಯೋಜನೆಗಳನ್ನು ಪ್ರದರ್ಶಿಸಿದರು.
ಈ ಪ್ರದರ್ಶನದಲ್ಲಿ ಅರೋಗ್ಯ, ಕೃಷಿ, ಭದ್ರತೆ, ಸ್ವಚ್ಛತೆ, ಮಿಲಿಟರಿ ಮುಂತಾದ ಕ್ಷೇತ್ರಗಳ ವಿಷಯಾಧಾರಿತ ನವೀನ ಆವಿಷ್ಕಾರಗಳು ಗಮನ ಸೆಳೆದವು.
ಪ್ರದರ್ಶನವನ್ನು ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಎನ್. ಚಂದ್ರಶೇಖರ ಉದ್ಘಾಟಿಸಿ, “ಪ್ರತಿಯೊಂದು ಯೋಜನೆಯಲ್ಲೂ ವಿದ್ಯಾರ್ಥಿಗಳ ಶ್ರಮ, ಕ್ರಿಯಾತ್ಮಕ ಚಿಂತನೆ ಮತ್ತು ನವೀನತೆಯ ಸ್ಪಷ್ಟ ಪ್ರತಿಬಿಂಬ ಇದೆ.
ನಿಮ್ಮೆಲ್ಲರ ಶ್ರಮ, ಸೃಜನಾತ್ಮಕತೆ, ಅಧ್ಯಾಪರುಗಳ ಮಾರ್ಗದರ್ಶನ ಮತ್ತು ತಂಡದ ಒಗ್ಗಟ್ಟಿನಿಂದ ಇಂತಹ ಸಾಧನೆಗಳು ಆವಿಷ್ಕಾರಗೊಂಡಿವೆ ಹಾಗು ಇಂತ ಕಾರ್ಯ ಸಾಧನೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉದ್ಯೋಗಾವಕಾಶ ನೀಡುತ್ತವೆ” ಎಂದು ಹೇಳಿದರು.
ಕಾಲೇಜಿನ ಆಡಳಿತ ಮಂಡಳಿವತಿಯಿಂದ
ಆಕರ್ಷಕ ಹಾಗೂ ಆಧುನಿಕ ತಂತ್ರಜ್ಞಾನ ಆಧಾರಿತ ಅತ್ಯುತ್ತಮ ಪ್ರಾಜೆಕ್ಟ್ ಗಳಿಗೆ ಬಹುಮಾನ ನೀಡಿ ವಿದ್ಯಾರ್ಥಿಗಳನ್ನು ಪ್ರಶಂಸಿಸಲಾಯಿತು.
ಈ ತಾಂತ್ರಿಕ ಮೇಳದಲ್ಲಿ ಪೋಷಕರು, ಅಧ್ಯಾಪಕರು ಮತ್ತು ಇತರ ವಿದ್ಯಾರ್ಥಿಗಳು ಪಾಲ್ಗೊಂಡು ಅದೊಂದು “ಸಾಧನಾ ಸಮಾವೇಶ” ಎಂಬುದಕ್ಕೆ ಸಾಕ್ಷಿಯಾದರು
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…