Categories: ಕೋಲಾರ

ಸಿ.ಬೈರೇಗೌಡ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ

ಕೊಲಾರ: ನಗರದ ಹೊರವಲಯದ ಸಿ.ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸೃಜನಾತ್ಮಕತೆಯನ್ನು ಎತ್ತಿ ಹಿಡಿದ ವಾರ್ಷಿಕ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ ನಡೆಯಿತು.

ಈ ಕಾರ್ಯಕ್ರಮದಲ್ಲಿ ಇ.ಸಿ, ಸಿ.ಎಸ್, ಎ.ಐ.ಎಂ.ಎಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪ್ರಾಯೋಗಿಕ ಜ್ಞಾನವನ್ನು ಆಧಾರವಾಗಿಸಿಕೊಂಡು ವಿನ್ಯಾಸಗೊಳಿಸಿದ ಆಧುನಿಕ ತಂತ್ರಜ್ಞಾನ ಆಧಾರಿತ ಆಕರ್ಷಕ ಯೋಜನೆಗಳನ್ನು ಪ್ರದರ್ಶಿಸಿದರು.

ಈ ಪ್ರದರ್ಶನದಲ್ಲಿ ಅರೋಗ್ಯ, ಕೃಷಿ, ಭದ್ರತೆ, ಸ್ವಚ್ಛತೆ, ಮಿಲಿಟರಿ ಮುಂತಾದ ಕ್ಷೇತ್ರಗಳ ವಿಷಯಾಧಾರಿತ ನವೀನ ಆವಿಷ್ಕಾರಗಳು ಗಮನ ಸೆಳೆದವು.
ಪ್ರದರ್ಶನವನ್ನು ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಎನ್. ಚಂದ್ರಶೇಖರ ಉದ್ಘಾಟಿಸಿ, “ಪ್ರತಿಯೊಂದು ಯೋಜನೆಯಲ್ಲೂ ವಿದ್ಯಾರ್ಥಿಗಳ ಶ್ರಮ, ಕ್ರಿಯಾತ್ಮಕ ಚಿಂತನೆ ಮತ್ತು ನವೀನತೆಯ ಸ್ಪಷ್ಟ ಪ್ರತಿಬಿಂಬ ಇದೆ.
ನಿಮ್ಮೆಲ್ಲರ ಶ್ರಮ, ಸೃಜನಾತ್ಮಕತೆ, ಅಧ್ಯಾಪರುಗಳ ಮಾರ್ಗದರ್ಶನ ಮತ್ತು ತಂಡದ ಒಗ್ಗಟ್ಟಿನಿಂದ ಇಂತಹ ಸಾಧನೆಗಳು ಆವಿಷ್ಕಾರಗೊಂಡಿವೆ ಹಾಗು ಇಂತ ಕಾರ್ಯ ಸಾಧನೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉದ್ಯೋಗಾವಕಾಶ ನೀಡುತ್ತವೆ” ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿವತಿಯಿಂದ
ಆಕರ್ಷಕ ಹಾಗೂ ಆಧುನಿಕ ತಂತ್ರಜ್ಞಾನ ಆಧಾರಿತ ಅತ್ಯುತ್ತಮ ಪ್ರಾಜೆಕ್ಟ್ ಗಳಿಗೆ ಬಹುಮಾನ ನೀಡಿ ವಿದ್ಯಾರ್ಥಿಗಳನ್ನು ಪ್ರಶಂಸಿಸಲಾಯಿತು.

ಈ ತಾಂತ್ರಿಕ ಮೇಳದಲ್ಲಿ ಪೋಷಕರು, ಅಧ್ಯಾಪಕರು ಮತ್ತು ಇತರ ವಿದ್ಯಾರ್ಥಿಗಳು ಪಾಲ್ಗೊಂಡು ಅದೊಂದು “ಸಾಧನಾ ಸಮಾವೇಶ” ಎಂಬುದಕ್ಕೆ ಸಾಕ್ಷಿಯಾದರು

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

19 minutes ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

6 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

17 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

18 hours ago