ಕೊಲಾರ: ನಗರದ ಹೊರವಲಯದ ಸಿ.ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸೃಜನಾತ್ಮಕತೆಯನ್ನು ಎತ್ತಿ ಹಿಡಿದ ವಾರ್ಷಿಕ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ ನಡೆಯಿತು.
ಈ ಕಾರ್ಯಕ್ರಮದಲ್ಲಿ ಇ.ಸಿ, ಸಿ.ಎಸ್, ಎ.ಐ.ಎಂ.ಎಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪ್ರಾಯೋಗಿಕ ಜ್ಞಾನವನ್ನು ಆಧಾರವಾಗಿಸಿಕೊಂಡು ವಿನ್ಯಾಸಗೊಳಿಸಿದ ಆಧುನಿಕ ತಂತ್ರಜ್ಞಾನ ಆಧಾರಿತ ಆಕರ್ಷಕ ಯೋಜನೆಗಳನ್ನು ಪ್ರದರ್ಶಿಸಿದರು.
ಈ ಪ್ರದರ್ಶನದಲ್ಲಿ ಅರೋಗ್ಯ, ಕೃಷಿ, ಭದ್ರತೆ, ಸ್ವಚ್ಛತೆ, ಮಿಲಿಟರಿ ಮುಂತಾದ ಕ್ಷೇತ್ರಗಳ ವಿಷಯಾಧಾರಿತ ನವೀನ ಆವಿಷ್ಕಾರಗಳು ಗಮನ ಸೆಳೆದವು.
ಪ್ರದರ್ಶನವನ್ನು ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಎನ್. ಚಂದ್ರಶೇಖರ ಉದ್ಘಾಟಿಸಿ, “ಪ್ರತಿಯೊಂದು ಯೋಜನೆಯಲ್ಲೂ ವಿದ್ಯಾರ್ಥಿಗಳ ಶ್ರಮ, ಕ್ರಿಯಾತ್ಮಕ ಚಿಂತನೆ ಮತ್ತು ನವೀನತೆಯ ಸ್ಪಷ್ಟ ಪ್ರತಿಬಿಂಬ ಇದೆ.
ನಿಮ್ಮೆಲ್ಲರ ಶ್ರಮ, ಸೃಜನಾತ್ಮಕತೆ, ಅಧ್ಯಾಪರುಗಳ ಮಾರ್ಗದರ್ಶನ ಮತ್ತು ತಂಡದ ಒಗ್ಗಟ್ಟಿನಿಂದ ಇಂತಹ ಸಾಧನೆಗಳು ಆವಿಷ್ಕಾರಗೊಂಡಿವೆ ಹಾಗು ಇಂತ ಕಾರ್ಯ ಸಾಧನೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉದ್ಯೋಗಾವಕಾಶ ನೀಡುತ್ತವೆ” ಎಂದು ಹೇಳಿದರು.
ಕಾಲೇಜಿನ ಆಡಳಿತ ಮಂಡಳಿವತಿಯಿಂದ
ಆಕರ್ಷಕ ಹಾಗೂ ಆಧುನಿಕ ತಂತ್ರಜ್ಞಾನ ಆಧಾರಿತ ಅತ್ಯುತ್ತಮ ಪ್ರಾಜೆಕ್ಟ್ ಗಳಿಗೆ ಬಹುಮಾನ ನೀಡಿ ವಿದ್ಯಾರ್ಥಿಗಳನ್ನು ಪ್ರಶಂಸಿಸಲಾಯಿತು.
ಈ ತಾಂತ್ರಿಕ ಮೇಳದಲ್ಲಿ ಪೋಷಕರು, ಅಧ್ಯಾಪಕರು ಮತ್ತು ಇತರ ವಿದ್ಯಾರ್ಥಿಗಳು ಪಾಲ್ಗೊಂಡು ಅದೊಂದು “ಸಾಧನಾ ಸಮಾವೇಶ” ಎಂಬುದಕ್ಕೆ ಸಾಕ್ಷಿಯಾದರು
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…