ಕೊಲಾರ: ನಗರದ ಹೊರವಲಯದ ಸಿ.ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸೃಜನಾತ್ಮಕತೆಯನ್ನು ಎತ್ತಿ ಹಿಡಿದ ವಾರ್ಷಿಕ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ ನಡೆಯಿತು.
ಈ ಕಾರ್ಯಕ್ರಮದಲ್ಲಿ ಇ.ಸಿ, ಸಿ.ಎಸ್, ಎ.ಐ.ಎಂ.ಎಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪ್ರಾಯೋಗಿಕ ಜ್ಞಾನವನ್ನು ಆಧಾರವಾಗಿಸಿಕೊಂಡು ವಿನ್ಯಾಸಗೊಳಿಸಿದ ಆಧುನಿಕ ತಂತ್ರಜ್ಞಾನ ಆಧಾರಿತ ಆಕರ್ಷಕ ಯೋಜನೆಗಳನ್ನು ಪ್ರದರ್ಶಿಸಿದರು.
ಈ ಪ್ರದರ್ಶನದಲ್ಲಿ ಅರೋಗ್ಯ, ಕೃಷಿ, ಭದ್ರತೆ, ಸ್ವಚ್ಛತೆ, ಮಿಲಿಟರಿ ಮುಂತಾದ ಕ್ಷೇತ್ರಗಳ ವಿಷಯಾಧಾರಿತ ನವೀನ ಆವಿಷ್ಕಾರಗಳು ಗಮನ ಸೆಳೆದವು.
ಪ್ರದರ್ಶನವನ್ನು ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಎನ್. ಚಂದ್ರಶೇಖರ ಉದ್ಘಾಟಿಸಿ, “ಪ್ರತಿಯೊಂದು ಯೋಜನೆಯಲ್ಲೂ ವಿದ್ಯಾರ್ಥಿಗಳ ಶ್ರಮ, ಕ್ರಿಯಾತ್ಮಕ ಚಿಂತನೆ ಮತ್ತು ನವೀನತೆಯ ಸ್ಪಷ್ಟ ಪ್ರತಿಬಿಂಬ ಇದೆ.
ನಿಮ್ಮೆಲ್ಲರ ಶ್ರಮ, ಸೃಜನಾತ್ಮಕತೆ, ಅಧ್ಯಾಪರುಗಳ ಮಾರ್ಗದರ್ಶನ ಮತ್ತು ತಂಡದ ಒಗ್ಗಟ್ಟಿನಿಂದ ಇಂತಹ ಸಾಧನೆಗಳು ಆವಿಷ್ಕಾರಗೊಂಡಿವೆ ಹಾಗು ಇಂತ ಕಾರ್ಯ ಸಾಧನೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉದ್ಯೋಗಾವಕಾಶ ನೀಡುತ್ತವೆ” ಎಂದು ಹೇಳಿದರು.
ಕಾಲೇಜಿನ ಆಡಳಿತ ಮಂಡಳಿವತಿಯಿಂದ
ಆಕರ್ಷಕ ಹಾಗೂ ಆಧುನಿಕ ತಂತ್ರಜ್ಞಾನ ಆಧಾರಿತ ಅತ್ಯುತ್ತಮ ಪ್ರಾಜೆಕ್ಟ್ ಗಳಿಗೆ ಬಹುಮಾನ ನೀಡಿ ವಿದ್ಯಾರ್ಥಿಗಳನ್ನು ಪ್ರಶಂಸಿಸಲಾಯಿತು.
ಈ ತಾಂತ್ರಿಕ ಮೇಳದಲ್ಲಿ ಪೋಷಕರು, ಅಧ್ಯಾಪಕರು ಮತ್ತು ಇತರ ವಿದ್ಯಾರ್ಥಿಗಳು ಪಾಲ್ಗೊಂಡು ಅದೊಂದು “ಸಾಧನಾ ಸಮಾವೇಶ” ಎಂಬುದಕ್ಕೆ ಸಾಕ್ಷಿಯಾದರು
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…