Categories: ಕೋಲಾರ

ಸೀತಾರಾಮ್ ಯೆಚೂರಿ ನಿಧನ ದೇಶಕ್ಕೆ ತುಂಬಲಾರದ ನಷ್ಟ-ಹ.ಮಾ ರಾಮಚಂದ್ರಪ್ಪ

ಕೋಲಾರ: ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರ ಅಗಲಿಕೆ ದೇಶದ ದುಡಿಯುವ ಜನತೆಗೆ ಹಾಗೂ ಎಡ ಚಳುವಳಿಗೆ ಬಹುದೊಡ್ಡ ನಷ್ಟ ಉಂಟು ಮಾಡಿದೆ ಎಂದು ಹಿರಿಯ ಮುಖಂಡ ಹ.ಮಾ ರಾಮಚಂದ್ರಪ್ಪ ತಿಳಿಸಿದರು.

ನಗರದ ಮೆಕ್ಕೆ ವೃತ್ತದಲ್ಲಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ವತಿಯಿಂದ ಸೀತಾರಾಮ್ ಯೆಚೂರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಎರಡು ನಿಮಿಷಗಳ ಕಾಲ ಮೌನ ಗೌರವ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೆ ಹೋರಾಟದ ಮೂಲಕ ಸಮಾಜದ ಶೋಷಣೆ ದಬ್ಬಾಳಿಕೆ ವಿರುದ್ದ ಸಂಸತ್ತಿನ ಒಳಗೂ ಹೊರಗೂ ಹೋರಾಟ ಮಾಡಿದ್ದಾರೆ ದೇಶದಲ್ಲಿ ಒಳಿತಿಗಾಗಿ ಮಾರ್ಗದರ್ಶನ ಮಾಡುವ ನಾಯಕರಾಗಿ ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ, ಸಮಾಜದ ಪರಿವರ್ತನೆಗಾಗಿ ಮುಡಿಪಾಗಿಟ್ಟಿದ್ದರು ಎಂದರು.

ಪಾರ್ಲಿಮೆಂಟ್ ನಲ್ಲಿ ರಾಜ್ಯಸಭಾ ಸದಸ್ಯರಾಗಿ ದೇಶದ ಸಮಗ್ರ ಅಭಿವೃದ್ಧಿ ಹಾಗು ಸಮಗ್ರತೆ, ಐಕ್ಯತೆಯ ಮೇಲೆ ನ್ಯಾಯಯುತವಾದ ವಿಷಯಗಳನ್ನು ಮಂಡಿಸಿದ್ದಾರೆ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅದನ್ನು ವಿರೋಧಿಸಿ ನೇರವಾಗಿ ಇಂದಿರಾ ಗಾಂಧಿಯವರನ್ನೇ ಎದುರಿಸಿದ ದಿಟ್ಟತನ ಅವರದು ಅವರ ಭಾಷಣವನ್ನು ಕೇಳಲು ಸಾಲುಗಟ್ಟಿ ನಿಂತಿದ್ದ ಉದಾಹರಣೆಗಳು ಇದ್ದವು ಎಂದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಅವರ ಪ್ರಬುದ್ಧತೆಯೂ ಕೇವಲ ದೇಶದೊಳಗೆ ಮಾತ್ರವಲ್ಲ ವಿಶ್ವದೊಳಗೂ ಮಾದರಿಯಾಗಿದೆ. ಮಾರ್ಕ್ಸ್‌ವಾದದ ಹಲವು ಆಯಾಮಗಳಲ್ಲಿ ಆಳವಾದ ಪರಿಣತಿ ಅವರನ್ನು ವಿಶ್ವದ ಮುಖ್ಯ ಮಾರ್ಕ್ಸ್‌ವಾದಿ ಚಿಂತಕರನ್ನಾಗಿಸಿತ್ತು ಭಾರತದ ಯುವಜನತೆಗೆ ಕಾಮ್ರೇಡ್ ಸೀತಾರಾಮ ಯೆಚೂರಿಯವರ ಬದ್ಧತೆಯ ಜೀವನ ಎಂದಿಗೂ ಮಾದರಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ ಪಂಡಿತ್ ಮುನಿವೆಂಕಟಪ್ಪ, ಟಿ.ಎಂ ವೆಂಕಟೇಶ್, ಹೆಚ್.ಬಿ ಕೃಷ್ಣಪ್ಪ, ವಿ.ನಾರಾಯಣರೆಡ್ಡಿ, ಗೀತಾ, ವಿಜಯಕೃಷ್ಣ, ಆಲಹಳ್ಳಿ ವೆಂಕಟೇಶಪ್ಪ, ಡಿ ಮುನೇಶ್, ಭೀಮರಾಜ್, ಮಂಜುಳಾ, ಮುಸ್ತಫಾ, ಸತೀಶ್, ಅಪ್ಪಯ್ಯಣ್ಣ, ಯಲ್ಲಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

10 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

11 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

12 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

12 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

16 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

18 hours ago