Categories: ಕೋಲಾರ

ಸೀತಾರಾಮ್ ಯೆಚೂರಿ ನಿಧನ ದೇಶಕ್ಕೆ ತುಂಬಲಾರದ ನಷ್ಟ-ಹ.ಮಾ ರಾಮಚಂದ್ರಪ್ಪ

ಕೋಲಾರ: ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರ ಅಗಲಿಕೆ ದೇಶದ ದುಡಿಯುವ ಜನತೆಗೆ ಹಾಗೂ ಎಡ ಚಳುವಳಿಗೆ ಬಹುದೊಡ್ಡ ನಷ್ಟ ಉಂಟು ಮಾಡಿದೆ ಎಂದು ಹಿರಿಯ ಮುಖಂಡ ಹ.ಮಾ ರಾಮಚಂದ್ರಪ್ಪ ತಿಳಿಸಿದರು.

ನಗರದ ಮೆಕ್ಕೆ ವೃತ್ತದಲ್ಲಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ವತಿಯಿಂದ ಸೀತಾರಾಮ್ ಯೆಚೂರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಎರಡು ನಿಮಿಷಗಳ ಕಾಲ ಮೌನ ಗೌರವ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೆ ಹೋರಾಟದ ಮೂಲಕ ಸಮಾಜದ ಶೋಷಣೆ ದಬ್ಬಾಳಿಕೆ ವಿರುದ್ದ ಸಂಸತ್ತಿನ ಒಳಗೂ ಹೊರಗೂ ಹೋರಾಟ ಮಾಡಿದ್ದಾರೆ ದೇಶದಲ್ಲಿ ಒಳಿತಿಗಾಗಿ ಮಾರ್ಗದರ್ಶನ ಮಾಡುವ ನಾಯಕರಾಗಿ ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ, ಸಮಾಜದ ಪರಿವರ್ತನೆಗಾಗಿ ಮುಡಿಪಾಗಿಟ್ಟಿದ್ದರು ಎಂದರು.

ಪಾರ್ಲಿಮೆಂಟ್ ನಲ್ಲಿ ರಾಜ್ಯಸಭಾ ಸದಸ್ಯರಾಗಿ ದೇಶದ ಸಮಗ್ರ ಅಭಿವೃದ್ಧಿ ಹಾಗು ಸಮಗ್ರತೆ, ಐಕ್ಯತೆಯ ಮೇಲೆ ನ್ಯಾಯಯುತವಾದ ವಿಷಯಗಳನ್ನು ಮಂಡಿಸಿದ್ದಾರೆ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅದನ್ನು ವಿರೋಧಿಸಿ ನೇರವಾಗಿ ಇಂದಿರಾ ಗಾಂಧಿಯವರನ್ನೇ ಎದುರಿಸಿದ ದಿಟ್ಟತನ ಅವರದು ಅವರ ಭಾಷಣವನ್ನು ಕೇಳಲು ಸಾಲುಗಟ್ಟಿ ನಿಂತಿದ್ದ ಉದಾಹರಣೆಗಳು ಇದ್ದವು ಎಂದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಅವರ ಪ್ರಬುದ್ಧತೆಯೂ ಕೇವಲ ದೇಶದೊಳಗೆ ಮಾತ್ರವಲ್ಲ ವಿಶ್ವದೊಳಗೂ ಮಾದರಿಯಾಗಿದೆ. ಮಾರ್ಕ್ಸ್‌ವಾದದ ಹಲವು ಆಯಾಮಗಳಲ್ಲಿ ಆಳವಾದ ಪರಿಣತಿ ಅವರನ್ನು ವಿಶ್ವದ ಮುಖ್ಯ ಮಾರ್ಕ್ಸ್‌ವಾದಿ ಚಿಂತಕರನ್ನಾಗಿಸಿತ್ತು ಭಾರತದ ಯುವಜನತೆಗೆ ಕಾಮ್ರೇಡ್ ಸೀತಾರಾಮ ಯೆಚೂರಿಯವರ ಬದ್ಧತೆಯ ಜೀವನ ಎಂದಿಗೂ ಮಾದರಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ ಪಂಡಿತ್ ಮುನಿವೆಂಕಟಪ್ಪ, ಟಿ.ಎಂ ವೆಂಕಟೇಶ್, ಹೆಚ್.ಬಿ ಕೃಷ್ಣಪ್ಪ, ವಿ.ನಾರಾಯಣರೆಡ್ಡಿ, ಗೀತಾ, ವಿಜಯಕೃಷ್ಣ, ಆಲಹಳ್ಳಿ ವೆಂಕಟೇಶಪ್ಪ, ಡಿ ಮುನೇಶ್, ಭೀಮರಾಜ್, ಮಂಜುಳಾ, ಮುಸ್ತಫಾ, ಸತೀಶ್, ಅಪ್ಪಯ್ಯಣ್ಣ, ಯಲ್ಲಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago