Categories: ಕೋಲಾರ

ಸೀತಾರಾಮ್ ಯೆಚೂರಿ ನಿಧನ ದೇಶಕ್ಕೆ ತುಂಬಲಾರದ ನಷ್ಟ-ಹ.ಮಾ ರಾಮಚಂದ್ರಪ್ಪ

ಕೋಲಾರ: ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರ ಅಗಲಿಕೆ ದೇಶದ ದುಡಿಯುವ ಜನತೆಗೆ ಹಾಗೂ ಎಡ ಚಳುವಳಿಗೆ ಬಹುದೊಡ್ಡ ನಷ್ಟ ಉಂಟು ಮಾಡಿದೆ ಎಂದು ಹಿರಿಯ ಮುಖಂಡ ಹ.ಮಾ ರಾಮಚಂದ್ರಪ್ಪ ತಿಳಿಸಿದರು.

ನಗರದ ಮೆಕ್ಕೆ ವೃತ್ತದಲ್ಲಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ವತಿಯಿಂದ ಸೀತಾರಾಮ್ ಯೆಚೂರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಎರಡು ನಿಮಿಷಗಳ ಕಾಲ ಮೌನ ಗೌರವ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೆ ಹೋರಾಟದ ಮೂಲಕ ಸಮಾಜದ ಶೋಷಣೆ ದಬ್ಬಾಳಿಕೆ ವಿರುದ್ದ ಸಂಸತ್ತಿನ ಒಳಗೂ ಹೊರಗೂ ಹೋರಾಟ ಮಾಡಿದ್ದಾರೆ ದೇಶದಲ್ಲಿ ಒಳಿತಿಗಾಗಿ ಮಾರ್ಗದರ್ಶನ ಮಾಡುವ ನಾಯಕರಾಗಿ ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ, ಸಮಾಜದ ಪರಿವರ್ತನೆಗಾಗಿ ಮುಡಿಪಾಗಿಟ್ಟಿದ್ದರು ಎಂದರು.

ಪಾರ್ಲಿಮೆಂಟ್ ನಲ್ಲಿ ರಾಜ್ಯಸಭಾ ಸದಸ್ಯರಾಗಿ ದೇಶದ ಸಮಗ್ರ ಅಭಿವೃದ್ಧಿ ಹಾಗು ಸಮಗ್ರತೆ, ಐಕ್ಯತೆಯ ಮೇಲೆ ನ್ಯಾಯಯುತವಾದ ವಿಷಯಗಳನ್ನು ಮಂಡಿಸಿದ್ದಾರೆ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅದನ್ನು ವಿರೋಧಿಸಿ ನೇರವಾಗಿ ಇಂದಿರಾ ಗಾಂಧಿಯವರನ್ನೇ ಎದುರಿಸಿದ ದಿಟ್ಟತನ ಅವರದು ಅವರ ಭಾಷಣವನ್ನು ಕೇಳಲು ಸಾಲುಗಟ್ಟಿ ನಿಂತಿದ್ದ ಉದಾಹರಣೆಗಳು ಇದ್ದವು ಎಂದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಅವರ ಪ್ರಬುದ್ಧತೆಯೂ ಕೇವಲ ದೇಶದೊಳಗೆ ಮಾತ್ರವಲ್ಲ ವಿಶ್ವದೊಳಗೂ ಮಾದರಿಯಾಗಿದೆ. ಮಾರ್ಕ್ಸ್‌ವಾದದ ಹಲವು ಆಯಾಮಗಳಲ್ಲಿ ಆಳವಾದ ಪರಿಣತಿ ಅವರನ್ನು ವಿಶ್ವದ ಮುಖ್ಯ ಮಾರ್ಕ್ಸ್‌ವಾದಿ ಚಿಂತಕರನ್ನಾಗಿಸಿತ್ತು ಭಾರತದ ಯುವಜನತೆಗೆ ಕಾಮ್ರೇಡ್ ಸೀತಾರಾಮ ಯೆಚೂರಿಯವರ ಬದ್ಧತೆಯ ಜೀವನ ಎಂದಿಗೂ ಮಾದರಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ ಪಂಡಿತ್ ಮುನಿವೆಂಕಟಪ್ಪ, ಟಿ.ಎಂ ವೆಂಕಟೇಶ್, ಹೆಚ್.ಬಿ ಕೃಷ್ಣಪ್ಪ, ವಿ.ನಾರಾಯಣರೆಡ್ಡಿ, ಗೀತಾ, ವಿಜಯಕೃಷ್ಣ, ಆಲಹಳ್ಳಿ ವೆಂಕಟೇಶಪ್ಪ, ಡಿ ಮುನೇಶ್, ಭೀಮರಾಜ್, ಮಂಜುಳಾ, ಮುಸ್ತಫಾ, ಸತೀಶ್, ಅಪ್ಪಯ್ಯಣ್ಣ, ಯಲ್ಲಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago