ಕೋಲಾರ:ತಾಲ್ಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಮದಲ್ಲಿನ ಬಿಜಿಎಸ್ ಶಾಲೆಯಲ್ಲಿ ಬುಧವಾರ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸೀತಿಹೊಸೂರು ಮುರಳಿಗೌಡ ನೇತೃತ್ವದಲ್ಲಿ ಶಾಲೆಗೆ ಹಸಿರು ಹೊದಿಗೆ ಹಾಗೂ ನೂರು ಗಿಡಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮುರಳಿಗೌಡ ಮಾತನಾಡಿ, ವರ್ಷದ ಒಂದು ದಿನದ ಬದಲಿಗೆ ಪ್ರತಿನಿತ್ಯವೂ ಪರಿಸರ ಸಂರಕ್ಷಣೆಗಾಗಿ ಕೈಜೋಡಿಸಬೇಕು ನಮ್ಮ ಪರಿಸರವನ್ನು ಉತ್ತಮವಾಗಿ ಕಾಪಾಡಿಕೊಳ್ಳುತ್ತೇನೆ ಎಂದು ಪ್ರತಿಯೊಬ್ಬರೂ ಪ್ರಮಾಣ ಮಾಡಬೇಕು ಶಾಲೆಯ ಆವರಣದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ ಸಾರುವ ಒಂದು ಸುಂದರ ಪ್ರದೇಶ ಇದಾಗಬೇಕಾಗಿದೆ. ಸಂಬಂಧಪಟ್ಟ ಪೋಷಕರು ಹಾಗೂ ವಿಧ್ಯಾರ್ಥಿಗಳು ಇತ್ತ ಗಮನ ಹರಿಸಬೇಕಾಗಿದೆ. ಪರಿಸರ ರಕ್ಷಣೆಯಿಂದ ಮಾತ್ರ ಮನುಕುಲ ಉಳಿಯಲು ಸಾಧ್ಯವಿದೆ. ಪ್ರತಿಯೊಬ್ಬರು ಗಿಡಮರಗಳನ್ನು ರಕ್ಷಿಸುವ ಮತ್ತು ಪೋಷಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ್, ಶಿಕ್ಷಕರು ವಿಧ್ಯಾರ್ಥಿಗಳು ಇದ್ದರು
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…