ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಲೀಜನ್ ನ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭವನ್ನು ತಾಲೂಕಿನ ಶ್ರೀ ಘಾಟಿ ಸಮೀಪದ ಲಘುಮೇನಹಳ್ಳಿ ಗೇಟ್ ಸಮೀಪ ಆಯೋಜನೆ ಮಾಡಲಾಗಿತ್ತು.

ಘಟಕದ ನೂತನ‌ ಅಧ್ಯಕ್ಷರಾಗಿ ಜಯಕಾಂತಮ್ಮ, ಉಪಾಧ್ಯಕ್ಷರಾಗಿ ಸವಿತಾ ಆನಂದ್, ಕಾರ್ಯದರ್ಶಿಯಾಗಿ ಸೌಮ್ಯ, ಖಜಾಂಜಿ  ಶೋಭಾ ನಾರಾಯಣಸ್ವಾಮಿ ಸೇರಿದಂತೆ 20 ಮಂದಿ ಅಧಿಕಾರ ಸ್ವೀಕರಿಸಿದರು.

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಜಯಕಾಂತಮ್ಮ, ಸೀನಿಯರ್ ಸಿಟಿಜನ್ ಗೆ ಈ ಸಂಸ್ಥೆ ಬಹಳ ಅವಶ್ಯಕತೆ ಇದೆ. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಮಾನ ಮನಸ್ಕ, ಸಮಾಜ ಮುಖಿ ವ್ಯಕ್ತಿಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದ್ದು, ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ, ತ್ಯಾಜ್ಯದ ವಿರುದ್ಧ ಸಮರ, ಪ್ಲಾಸ್ಟಿಕ್ ನಿರ್ಮೂಲನೆ, ಸಸಿ ನೆಡುವಿಕೆ, ಕಲ್ಯಾಣಿ ಸ್ವಚ್ಛತೆ ಸೇರಿದಂತೆ ಇತರೆ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ನಂತರ ರಾಷ್ಟ್ರೀಯ ಅಧ್ಯಕ್ಷ ಚಿತ್ರಕುಮಾರ್ ಮಾತನಾಡಿ, ತೂಬಗೆರೆ ವ್ಯಾಪ್ತಿಯಯಲ್ಲಿ ಮಹಿಳೆಯರನ್ನು‌ ಒಳಗೊಂಡ ಘಟಕವನ್ನು ಸ್ಥಾಪಿಸಬೇಕು ಎಂಬ ನಿರ್ಧಾರದಿಂದ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಗೆ ಸ್ಥಾಪಿಸಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ಎಲ್ಲರೂ ಸೇವಾ ಮನೋಭಾವದಿಂದ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಮಾರ್ಚ್ 8-9ರಂದು ಉಡುಪಿಯಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯುತ್ತದೆ. ಇದರಲ್ಲಿ ಎಲ್ಲರೂ ಭಾಗವಹಿಸಿ ಸಮ್ಮೇಳನದ ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲರಲ್ಲೂ ನಾಯಕತ್ವ ಇದೆ, ಅದನ್ನ ಹೊರತರಲು ಇಂತಹ ವೇದಿಕೆಗಳು ಅತ್ಯಗತ್ಯವಾಗಿರುತ್ತವೆ ಎಂದರು.

ನಂತರ ಉಪಾಧ್ಯಕ್ಷ ಡಾ.ಎಂ ಶಿವಕುಮಾರ್ ಮಾತನಾಡಿ, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಭಾರತದಲ್ಲಿ ಸ್ಥಾಪನೆಗೊಂಡು “ಜವಾಬ್ದಾರಿಯುತ ಮತ್ತು ಸಕ್ರಿಯ ಪೌರತ್ವದ” ಧೈಯ ವಾಕ್ಯ ದೊಂದಿಗೆ ವಿಶ್ವದೆಲ್ಲಡೆ ಪಸರಿಸುತ್ತಿರುವ ಪ್ರಪ್ರಥಮ ಸ್ವಯಂ ಸೇವಾ ಸಂಸ್ಥೆ‌ ಇದಾಗಿದೆ. ಈ ವಿಶಿಷ್ಟ ಜೂನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ 40 ವಯಸ್ಸು ದಾಟಿದ ಹಿರಿಯ ಜೇಸಿಗಳು ಮತ್ತು ಸಮಾನ ಮನಸ್ಕ ಸಮಾಜ ಮುಖಿ ವ್ಯಕ್ತಿ ಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದೆ, ಇದು ವಿಶ್ವದ ಅತಿದೊಡ್ಡ ಸಮುದಾಯ ಸೇವಾ ಸಂಸ್ಥೆಯಾಗಿದೆ ಎಂದರು.

ಈ 27 ವರ್ಷಗಳಲ್ಲಿ ಸೀನಿಯರ್ ಛೇಂಬರ್ ನಮ್ಮ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಅಶಕ್ತರು, ಸಮಾಜದ ದುರ್ಬಲ ವರ್ಗದವರಿಗೆ ಸಹಾಯಸ್ತ, ಅಂಗವಿಕಲರಿಗೆ ನೆರವು, ಮಹಿಳಾ ಸಬಲೀಕರಣಕ್ಕಾಗಿ ಹೊಲಿಗೆ ಯಂತ್ರಗಳು, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಬೋಧನಾ ಸಾಧನಗಳು, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ತಲಾ ವಿದ್ಯಾರ್ಥಿ ವೇತನಗಳ ವಿತರಣೆ ಮಾಡಿ ಸಮುದಾಯದಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತನ್ನದೆ ಛಾಪನ್ನು ಮೂಡಿಸುತ್ತಿದೆ ಎಂದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ಟಿ.ರಂಗಪ್ಪ, ವಿಜಯಪುರ ಲೀಜನ್ ನ ಅಧ್ಯಕ್ಷ ಕೆ.ವೆಂಕಟೇಶ್, ರಾಷ್ಟ್ರೀಯ ಸಂಯೋಜಕರಾದ ಅಕ್ಷತಾ, ಎಂ.ಆರ್, ಜಯೇಶ್, ಉಪಾಧ್ಯಕ್ಷೆ ಸವೀತಾ ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

6 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

7 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

10 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

19 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago