ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಲೀಜನ್ ನ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭವನ್ನು ತಾಲೂಕಿನ ಶ್ರೀ ಘಾಟಿ ಸಮೀಪದ ಲಘುಮೇನಹಳ್ಳಿ ಗೇಟ್ ಸಮೀಪ ಆಯೋಜನೆ ಮಾಡಲಾಗಿತ್ತು.

ಘಟಕದ ನೂತನ‌ ಅಧ್ಯಕ್ಷರಾಗಿ ಜಯಕಾಂತಮ್ಮ, ಉಪಾಧ್ಯಕ್ಷರಾಗಿ ಸವಿತಾ ಆನಂದ್, ಕಾರ್ಯದರ್ಶಿಯಾಗಿ ಸೌಮ್ಯ, ಖಜಾಂಜಿ  ಶೋಭಾ ನಾರಾಯಣಸ್ವಾಮಿ ಸೇರಿದಂತೆ 20 ಮಂದಿ ಅಧಿಕಾರ ಸ್ವೀಕರಿಸಿದರು.

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಜಯಕಾಂತಮ್ಮ, ಸೀನಿಯರ್ ಸಿಟಿಜನ್ ಗೆ ಈ ಸಂಸ್ಥೆ ಬಹಳ ಅವಶ್ಯಕತೆ ಇದೆ. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಮಾನ ಮನಸ್ಕ, ಸಮಾಜ ಮುಖಿ ವ್ಯಕ್ತಿಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದ್ದು, ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ, ತ್ಯಾಜ್ಯದ ವಿರುದ್ಧ ಸಮರ, ಪ್ಲಾಸ್ಟಿಕ್ ನಿರ್ಮೂಲನೆ, ಸಸಿ ನೆಡುವಿಕೆ, ಕಲ್ಯಾಣಿ ಸ್ವಚ್ಛತೆ ಸೇರಿದಂತೆ ಇತರೆ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ನಂತರ ರಾಷ್ಟ್ರೀಯ ಅಧ್ಯಕ್ಷ ಚಿತ್ರಕುಮಾರ್ ಮಾತನಾಡಿ, ತೂಬಗೆರೆ ವ್ಯಾಪ್ತಿಯಯಲ್ಲಿ ಮಹಿಳೆಯರನ್ನು‌ ಒಳಗೊಂಡ ಘಟಕವನ್ನು ಸ್ಥಾಪಿಸಬೇಕು ಎಂಬ ನಿರ್ಧಾರದಿಂದ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಗೆ ಸ್ಥಾಪಿಸಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ಎಲ್ಲರೂ ಸೇವಾ ಮನೋಭಾವದಿಂದ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಮಾರ್ಚ್ 8-9ರಂದು ಉಡುಪಿಯಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯುತ್ತದೆ. ಇದರಲ್ಲಿ ಎಲ್ಲರೂ ಭಾಗವಹಿಸಿ ಸಮ್ಮೇಳನದ ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲರಲ್ಲೂ ನಾಯಕತ್ವ ಇದೆ, ಅದನ್ನ ಹೊರತರಲು ಇಂತಹ ವೇದಿಕೆಗಳು ಅತ್ಯಗತ್ಯವಾಗಿರುತ್ತವೆ ಎಂದರು.

ನಂತರ ಉಪಾಧ್ಯಕ್ಷ ಡಾ.ಎಂ ಶಿವಕುಮಾರ್ ಮಾತನಾಡಿ, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಭಾರತದಲ್ಲಿ ಸ್ಥಾಪನೆಗೊಂಡು “ಜವಾಬ್ದಾರಿಯುತ ಮತ್ತು ಸಕ್ರಿಯ ಪೌರತ್ವದ” ಧೈಯ ವಾಕ್ಯ ದೊಂದಿಗೆ ವಿಶ್ವದೆಲ್ಲಡೆ ಪಸರಿಸುತ್ತಿರುವ ಪ್ರಪ್ರಥಮ ಸ್ವಯಂ ಸೇವಾ ಸಂಸ್ಥೆ‌ ಇದಾಗಿದೆ. ಈ ವಿಶಿಷ್ಟ ಜೂನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ 40 ವಯಸ್ಸು ದಾಟಿದ ಹಿರಿಯ ಜೇಸಿಗಳು ಮತ್ತು ಸಮಾನ ಮನಸ್ಕ ಸಮಾಜ ಮುಖಿ ವ್ಯಕ್ತಿ ಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದೆ, ಇದು ವಿಶ್ವದ ಅತಿದೊಡ್ಡ ಸಮುದಾಯ ಸೇವಾ ಸಂಸ್ಥೆಯಾಗಿದೆ ಎಂದರು.

ಈ 27 ವರ್ಷಗಳಲ್ಲಿ ಸೀನಿಯರ್ ಛೇಂಬರ್ ನಮ್ಮ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಅಶಕ್ತರು, ಸಮಾಜದ ದುರ್ಬಲ ವರ್ಗದವರಿಗೆ ಸಹಾಯಸ್ತ, ಅಂಗವಿಕಲರಿಗೆ ನೆರವು, ಮಹಿಳಾ ಸಬಲೀಕರಣಕ್ಕಾಗಿ ಹೊಲಿಗೆ ಯಂತ್ರಗಳು, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಬೋಧನಾ ಸಾಧನಗಳು, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ತಲಾ ವಿದ್ಯಾರ್ಥಿ ವೇತನಗಳ ವಿತರಣೆ ಮಾಡಿ ಸಮುದಾಯದಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತನ್ನದೆ ಛಾಪನ್ನು ಮೂಡಿಸುತ್ತಿದೆ ಎಂದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ಟಿ.ರಂಗಪ್ಪ, ವಿಜಯಪುರ ಲೀಜನ್ ನ ಅಧ್ಯಕ್ಷ ಕೆ.ವೆಂಕಟೇಶ್, ರಾಷ್ಟ್ರೀಯ ಸಂಯೋಜಕರಾದ ಅಕ್ಷತಾ, ಎಂ.ಆರ್, ಜಯೇಶ್, ಉಪಾಧ್ಯಕ್ಷೆ ಸವೀತಾ ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

16 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

24 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago