ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಲೀಜನ್ ನ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭವನ್ನು ತಾಲೂಕಿನ ಶ್ರೀ ಘಾಟಿ ಸಮೀಪದ ಲಘುಮೇನಹಳ್ಳಿ ಗೇಟ್ ಸಮೀಪ ಆಯೋಜನೆ ಮಾಡಲಾಗಿತ್ತು.

ಘಟಕದ ನೂತನ‌ ಅಧ್ಯಕ್ಷರಾಗಿ ಜಯಕಾಂತಮ್ಮ, ಉಪಾಧ್ಯಕ್ಷರಾಗಿ ಸವಿತಾ ಆನಂದ್, ಕಾರ್ಯದರ್ಶಿಯಾಗಿ ಸೌಮ್ಯ, ಖಜಾಂಜಿ  ಶೋಭಾ ನಾರಾಯಣಸ್ವಾಮಿ ಸೇರಿದಂತೆ 20 ಮಂದಿ ಅಧಿಕಾರ ಸ್ವೀಕರಿಸಿದರು.

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಜಯಕಾಂತಮ್ಮ, ಸೀನಿಯರ್ ಸಿಟಿಜನ್ ಗೆ ಈ ಸಂಸ್ಥೆ ಬಹಳ ಅವಶ್ಯಕತೆ ಇದೆ. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಮಾನ ಮನಸ್ಕ, ಸಮಾಜ ಮುಖಿ ವ್ಯಕ್ತಿಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದ್ದು, ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ, ತ್ಯಾಜ್ಯದ ವಿರುದ್ಧ ಸಮರ, ಪ್ಲಾಸ್ಟಿಕ್ ನಿರ್ಮೂಲನೆ, ಸಸಿ ನೆಡುವಿಕೆ, ಕಲ್ಯಾಣಿ ಸ್ವಚ್ಛತೆ ಸೇರಿದಂತೆ ಇತರೆ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ನಂತರ ರಾಷ್ಟ್ರೀಯ ಅಧ್ಯಕ್ಷ ಚಿತ್ರಕುಮಾರ್ ಮಾತನಾಡಿ, ತೂಬಗೆರೆ ವ್ಯಾಪ್ತಿಯಯಲ್ಲಿ ಮಹಿಳೆಯರನ್ನು‌ ಒಳಗೊಂಡ ಘಟಕವನ್ನು ಸ್ಥಾಪಿಸಬೇಕು ಎಂಬ ನಿರ್ಧಾರದಿಂದ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಗೆ ಸ್ಥಾಪಿಸಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ಎಲ್ಲರೂ ಸೇವಾ ಮನೋಭಾವದಿಂದ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಮಾರ್ಚ್ 8-9ರಂದು ಉಡುಪಿಯಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯುತ್ತದೆ. ಇದರಲ್ಲಿ ಎಲ್ಲರೂ ಭಾಗವಹಿಸಿ ಸಮ್ಮೇಳನದ ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲರಲ್ಲೂ ನಾಯಕತ್ವ ಇದೆ, ಅದನ್ನ ಹೊರತರಲು ಇಂತಹ ವೇದಿಕೆಗಳು ಅತ್ಯಗತ್ಯವಾಗಿರುತ್ತವೆ ಎಂದರು.

ನಂತರ ಉಪಾಧ್ಯಕ್ಷ ಡಾ.ಎಂ ಶಿವಕುಮಾರ್ ಮಾತನಾಡಿ, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಭಾರತದಲ್ಲಿ ಸ್ಥಾಪನೆಗೊಂಡು “ಜವಾಬ್ದಾರಿಯುತ ಮತ್ತು ಸಕ್ರಿಯ ಪೌರತ್ವದ” ಧೈಯ ವಾಕ್ಯ ದೊಂದಿಗೆ ವಿಶ್ವದೆಲ್ಲಡೆ ಪಸರಿಸುತ್ತಿರುವ ಪ್ರಪ್ರಥಮ ಸ್ವಯಂ ಸೇವಾ ಸಂಸ್ಥೆ‌ ಇದಾಗಿದೆ. ಈ ವಿಶಿಷ್ಟ ಜೂನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ 40 ವಯಸ್ಸು ದಾಟಿದ ಹಿರಿಯ ಜೇಸಿಗಳು ಮತ್ತು ಸಮಾನ ಮನಸ್ಕ ಸಮಾಜ ಮುಖಿ ವ್ಯಕ್ತಿ ಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದೆ, ಇದು ವಿಶ್ವದ ಅತಿದೊಡ್ಡ ಸಮುದಾಯ ಸೇವಾ ಸಂಸ್ಥೆಯಾಗಿದೆ ಎಂದರು.

ಈ 27 ವರ್ಷಗಳಲ್ಲಿ ಸೀನಿಯರ್ ಛೇಂಬರ್ ನಮ್ಮ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಅಶಕ್ತರು, ಸಮಾಜದ ದುರ್ಬಲ ವರ್ಗದವರಿಗೆ ಸಹಾಯಸ್ತ, ಅಂಗವಿಕಲರಿಗೆ ನೆರವು, ಮಹಿಳಾ ಸಬಲೀಕರಣಕ್ಕಾಗಿ ಹೊಲಿಗೆ ಯಂತ್ರಗಳು, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಬೋಧನಾ ಸಾಧನಗಳು, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ತಲಾ ವಿದ್ಯಾರ್ಥಿ ವೇತನಗಳ ವಿತರಣೆ ಮಾಡಿ ಸಮುದಾಯದಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತನ್ನದೆ ಛಾಪನ್ನು ಮೂಡಿಸುತ್ತಿದೆ ಎಂದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ಟಿ.ರಂಗಪ್ಪ, ವಿಜಯಪುರ ಲೀಜನ್ ನ ಅಧ್ಯಕ್ಷ ಕೆ.ವೆಂಕಟೇಶ್, ರಾಷ್ಟ್ರೀಯ ಸಂಯೋಜಕರಾದ ಅಕ್ಷತಾ, ಎಂ.ಆರ್, ಜಯೇಶ್, ಉಪಾಧ್ಯಕ್ಷೆ ಸವೀತಾ ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

5 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

6 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

11 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

13 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

16 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago