ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಲೀಜನ್ ನ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭವನ್ನು ತಾಲೂಕಿನ ಶ್ರೀ ಘಾಟಿ ಸಮೀಪದ ಲಘುಮೇನಹಳ್ಳಿ ಗೇಟ್ ಸಮೀಪ ಆಯೋಜನೆ ಮಾಡಲಾಗಿತ್ತು.
ಘಟಕದ ನೂತನ ಅಧ್ಯಕ್ಷರಾಗಿ ಜಯಕಾಂತಮ್ಮ, ಉಪಾಧ್ಯಕ್ಷರಾಗಿ ಸವಿತಾ ಆನಂದ್, ಕಾರ್ಯದರ್ಶಿಯಾಗಿ ಸೌಮ್ಯ, ಖಜಾಂಜಿ ಶೋಭಾ ನಾರಾಯಣಸ್ವಾಮಿ ಸೇರಿದಂತೆ 20 ಮಂದಿ ಅಧಿಕಾರ ಸ್ವೀಕರಿಸಿದರು.
ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಜಯಕಾಂತಮ್ಮ, ಸೀನಿಯರ್ ಸಿಟಿಜನ್ ಗೆ ಈ ಸಂಸ್ಥೆ ಬಹಳ ಅವಶ್ಯಕತೆ ಇದೆ. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಸಮಾನ ಮನಸ್ಕ, ಸಮಾಜ ಮುಖಿ ವ್ಯಕ್ತಿಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದ್ದು, ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ, ತ್ಯಾಜ್ಯದ ವಿರುದ್ಧ ಸಮರ, ಪ್ಲಾಸ್ಟಿಕ್ ನಿರ್ಮೂಲನೆ, ಸಸಿ ನೆಡುವಿಕೆ, ಕಲ್ಯಾಣಿ ಸ್ವಚ್ಛತೆ ಸೇರಿದಂತೆ ಇತರೆ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ನಂತರ ರಾಷ್ಟ್ರೀಯ ಅಧ್ಯಕ್ಷ ಚಿತ್ರಕುಮಾರ್ ಮಾತನಾಡಿ, ತೂಬಗೆರೆ ವ್ಯಾಪ್ತಿಯಯಲ್ಲಿ ಮಹಿಳೆಯರನ್ನು ಒಳಗೊಂಡ ಘಟಕವನ್ನು ಸ್ಥಾಪಿಸಬೇಕು ಎಂಬ ನಿರ್ಧಾರದಿಂದ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಗೆ ಸ್ಥಾಪಿಸಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ಎಲ್ಲರೂ ಸೇವಾ ಮನೋಭಾವದಿಂದ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಮಾರ್ಚ್ 8-9ರಂದು ಉಡುಪಿಯಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯುತ್ತದೆ. ಇದರಲ್ಲಿ ಎಲ್ಲರೂ ಭಾಗವಹಿಸಿ ಸಮ್ಮೇಳನದ ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲರಲ್ಲೂ ನಾಯಕತ್ವ ಇದೆ, ಅದನ್ನ ಹೊರತರಲು ಇಂತಹ ವೇದಿಕೆಗಳು ಅತ್ಯಗತ್ಯವಾಗಿರುತ್ತವೆ ಎಂದರು.
ನಂತರ ಉಪಾಧ್ಯಕ್ಷ ಡಾ.ಎಂ ಶಿವಕುಮಾರ್ ಮಾತನಾಡಿ, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಭಾರತದಲ್ಲಿ ಸ್ಥಾಪನೆಗೊಂಡು “ಜವಾಬ್ದಾರಿಯುತ ಮತ್ತು ಸಕ್ರಿಯ ಪೌರತ್ವದ” ಧೈಯ ವಾಕ್ಯ ದೊಂದಿಗೆ ವಿಶ್ವದೆಲ್ಲಡೆ ಪಸರಿಸುತ್ತಿರುವ ಪ್ರಪ್ರಥಮ ಸ್ವಯಂ ಸೇವಾ ಸಂಸ್ಥೆ ಇದಾಗಿದೆ. ಈ ವಿಶಿಷ್ಟ ಜೂನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ 40 ವಯಸ್ಸು ದಾಟಿದ ಹಿರಿಯ ಜೇಸಿಗಳು ಮತ್ತು ಸಮಾನ ಮನಸ್ಕ ಸಮಾಜ ಮುಖಿ ವ್ಯಕ್ತಿ ಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದೆ, ಇದು ವಿಶ್ವದ ಅತಿದೊಡ್ಡ ಸಮುದಾಯ ಸೇವಾ ಸಂಸ್ಥೆಯಾಗಿದೆ ಎಂದರು.
ಈ 27 ವರ್ಷಗಳಲ್ಲಿ ಸೀನಿಯರ್ ಛೇಂಬರ್ ನಮ್ಮ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಅಶಕ್ತರು, ಸಮಾಜದ ದುರ್ಬಲ ವರ್ಗದವರಿಗೆ ಸಹಾಯಸ್ತ, ಅಂಗವಿಕಲರಿಗೆ ನೆರವು, ಮಹಿಳಾ ಸಬಲೀಕರಣಕ್ಕಾಗಿ ಹೊಲಿಗೆ ಯಂತ್ರಗಳು, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಬೋಧನಾ ಸಾಧನಗಳು, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ತಲಾ ವಿದ್ಯಾರ್ಥಿ ವೇತನಗಳ ವಿತರಣೆ ಮಾಡಿ ಸಮುದಾಯದಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತನ್ನದೆ ಛಾಪನ್ನು ಮೂಡಿಸುತ್ತಿದೆ ಎಂದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಟಿ.ರಂಗಪ್ಪ, ವಿಜಯಪುರ ಲೀಜನ್ ನ ಅಧ್ಯಕ್ಷ ಕೆ.ವೆಂಕಟೇಶ್, ರಾಷ್ಟ್ರೀಯ ಸಂಯೋಜಕರಾದ ಅಕ್ಷತಾ, ಎಂ.ಆರ್, ಜಯೇಶ್, ಉಪಾಧ್ಯಕ್ಷೆ ಸವೀತಾ ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…