ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕಕ್ಕೆ ನೂತನ ಲೀಜನ್ ನ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭವನ್ನು ತಾಲೂಕಿನ ಶ್ರೀ ಘಾಟಿ ಸಮೀಪದ ಲಘುಮೇನಹಳ್ಳಿ ಗೇಟ್ ಸಮೀಪ ಆಯೋಜನೆ ಮಾಡಲಾಗಿತ್ತು.

ಘಟಕದ ನೂತನ‌ ಅಧ್ಯಕ್ಷರಾಗಿ ಜಯಕಾಂತಮ್ಮ, ಉಪಾಧ್ಯಕ್ಷರಾಗಿ ಸವಿತಾ ಆನಂದ್, ಕಾರ್ಯದರ್ಶಿಯಾಗಿ ಸೌಮ್ಯ, ಖಜಾಂಜಿ  ಶೋಭಾ ನಾರಾಯಣಸ್ವಾಮಿ ಸೇರಿದಂತೆ 20 ಮಂದಿ ಅಧಿಕಾರ ಸ್ವೀಕರಿಸಿದರು.

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಜಯಕಾಂತಮ್ಮ, ಸೀನಿಯರ್ ಸಿಟಿಜನ್ ಗೆ ಈ ಸಂಸ್ಥೆ ಬಹಳ ಅವಶ್ಯಕತೆ ಇದೆ. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಮಾನ ಮನಸ್ಕ, ಸಮಾಜ ಮುಖಿ ವ್ಯಕ್ತಿಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದ್ದು, ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ, ತ್ಯಾಜ್ಯದ ವಿರುದ್ಧ ಸಮರ, ಪ್ಲಾಸ್ಟಿಕ್ ನಿರ್ಮೂಲನೆ, ಸಸಿ ನೆಡುವಿಕೆ, ಕಲ್ಯಾಣಿ ಸ್ವಚ್ಛತೆ ಸೇರಿದಂತೆ ಇತರೆ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ನಂತರ ರಾಷ್ಟ್ರೀಯ ಅಧ್ಯಕ್ಷ ಚಿತ್ರಕುಮಾರ್ ಮಾತನಾಡಿ, ತೂಬಗೆರೆ ವ್ಯಾಪ್ತಿಯಯಲ್ಲಿ ಮಹಿಳೆಯರನ್ನು‌ ಒಳಗೊಂಡ ಘಟಕವನ್ನು ಸ್ಥಾಪಿಸಬೇಕು ಎಂಬ ನಿರ್ಧಾರದಿಂದ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತೂಬಗೆರೆ ಲೀಜನ್ ಗೆ ಸ್ಥಾಪಿಸಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ಎಲ್ಲರೂ ಸೇವಾ ಮನೋಭಾವದಿಂದ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಮಾರ್ಚ್ 8-9ರಂದು ಉಡುಪಿಯಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯುತ್ತದೆ. ಇದರಲ್ಲಿ ಎಲ್ಲರೂ ಭಾಗವಹಿಸಿ ಸಮ್ಮೇಳನದ ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲರಲ್ಲೂ ನಾಯಕತ್ವ ಇದೆ, ಅದನ್ನ ಹೊರತರಲು ಇಂತಹ ವೇದಿಕೆಗಳು ಅತ್ಯಗತ್ಯವಾಗಿರುತ್ತವೆ ಎಂದರು.

ನಂತರ ಉಪಾಧ್ಯಕ್ಷ ಡಾ.ಎಂ ಶಿವಕುಮಾರ್ ಮಾತನಾಡಿ, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಭಾರತದಲ್ಲಿ ಸ್ಥಾಪನೆಗೊಂಡು “ಜವಾಬ್ದಾರಿಯುತ ಮತ್ತು ಸಕ್ರಿಯ ಪೌರತ್ವದ” ಧೈಯ ವಾಕ್ಯ ದೊಂದಿಗೆ ವಿಶ್ವದೆಲ್ಲಡೆ ಪಸರಿಸುತ್ತಿರುವ ಪ್ರಪ್ರಥಮ ಸ್ವಯಂ ಸೇವಾ ಸಂಸ್ಥೆ‌ ಇದಾಗಿದೆ. ಈ ವಿಶಿಷ್ಟ ಜೂನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ 40 ವಯಸ್ಸು ದಾಟಿದ ಹಿರಿಯ ಜೇಸಿಗಳು ಮತ್ತು ಸಮಾನ ಮನಸ್ಕ ಸಮಾಜ ಮುಖಿ ವ್ಯಕ್ತಿ ಗಳಿಗಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಯಾಗಿದೆ, ಇದು ವಿಶ್ವದ ಅತಿದೊಡ್ಡ ಸಮುದಾಯ ಸೇವಾ ಸಂಸ್ಥೆಯಾಗಿದೆ ಎಂದರು.

ಈ 27 ವರ್ಷಗಳಲ್ಲಿ ಸೀನಿಯರ್ ಛೇಂಬರ್ ನಮ್ಮ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಅಶಕ್ತರು, ಸಮಾಜದ ದುರ್ಬಲ ವರ್ಗದವರಿಗೆ ಸಹಾಯಸ್ತ, ಅಂಗವಿಕಲರಿಗೆ ನೆರವು, ಮಹಿಳಾ ಸಬಲೀಕರಣಕ್ಕಾಗಿ ಹೊಲಿಗೆ ಯಂತ್ರಗಳು, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಬೋಧನಾ ಸಾಧನಗಳು, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ತಲಾ ವಿದ್ಯಾರ್ಥಿ ವೇತನಗಳ ವಿತರಣೆ ಮಾಡಿ ಸಮುದಾಯದಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ತನ್ನದೆ ಛಾಪನ್ನು ಮೂಡಿಸುತ್ತಿದೆ ಎಂದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ಟಿ.ರಂಗಪ್ಪ, ವಿಜಯಪುರ ಲೀಜನ್ ನ ಅಧ್ಯಕ್ಷ ಕೆ.ವೆಂಕಟೇಶ್, ರಾಷ್ಟ್ರೀಯ ಸಂಯೋಜಕರಾದ ಅಕ್ಷತಾ, ಎಂ.ಆರ್, ಜಯೇಶ್, ಉಪಾಧ್ಯಕ್ಷೆ ಸವೀತಾ ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

8 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

19 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

23 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

2 days ago