ಸೀರೆ ಕದ್ದ ನಾರಿಯರು: ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಐವರು ಮಹಿಳೆಯರ ವಿರುದ್ಧ ಪ್ರಕರಣ ದಾಖಲು

ಕಡಪದಲ್ಲಿ ಐವರು ಮಹಿಳೆಯರು ಸೀರೆ ಖರೀದಿಸಲು ಹೋಗಿ ಅಂಗಡಿಯಲ್ಲಿದ್ದ ಸೀರೆಗಳನ್ನು ಕಾಲಿನ ನಡುವೆ ಇಟ್ಟು ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಆಂಧ್ರಪ್ರದೇಶದ ಕಡಪಾದಲ್ಲಿ ಗಾರ್ಮೆಂಟ್ಸ್ ಅಂಗಡಿಯೊಂದರಲ್ಲಿ ಬಟ್ಟೆ ಕಳವು ಮಾಡಿದ್ದಕ್ಕಾಗಿ ಒಟ್ಟು ಐವರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಾಗಿದೆ.

 ಅಂಗಡಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹಿಳೆಯರು ತಮ್ಮ ಸೀರೆಯೊಳಗೆ ಬಚ್ಚಿಟ್ಟು ಬಟ್ಟೆಗಳನ್ನು ಕದಿಯುವ ದೃಶ್ಯ ಸೆರೆಯಾಗಿದೆ.

ಐವರು ಮಹಿಳೆಯರು ಎಂದಿನಂತೆ ಅಂಗಡಿಗೆ ಪ್ರವೇಶಿಸಿ ಬಟ್ಟೆಗಳನ್ನು ತೆಗೆದುಕೊಳ್ಳುವ ನಾಟಕವಾಡಿದ್ದಾರೆ. ಇಬ್ಬರು ಮಹಿಳೆಯರು ತಮ್ಮ ಸೀರೆಯೊಳಗೆ ಬಟ್ಟೆಯ ಪೆಟ್ಟಿಗೆಗಳನ್ನು ಮರೆಮಾಚುವುದನ್ನು ಕಾಣಬಹುದು, ಆದರೆ ಇತರರು ಅವರಿಗೆ ಅಡ್ಡನಿಲ್ಲುತ್ತಾರೆ.

ಮಹಿಳೆಯೊಬ್ಬರು ಅಂಗಡಿಯಲ್ಲಿನ ಹೆಚ್ಚಿನ ಬಟ್ಟೆಗಳನ್ನು ತೋರಿಸಲು ಕೇಳಿಕೊಳ್ಳುವುದನ್ನು ಕಾಣಬಹುದು, ಆದರೆ, ಈ ವೇಳೆ ಇಬ್ಬರು ಮಹಿಳೆಯರು ತಮ್ಮ ಸೀರೆಯೊಳಗೆ ಬಟ್ಟೆಗಳನ್ನು ಮರೆಮಾಡುತ್ತಾರೆ. ಸ್ವಲ್ಪ ಸಮಯದ ನಂತರ, ಐವರೂ ಒಟ್ಟಿಗೆ ಅಂಗಡಿಯಿಂದ ಹೊರ ಹೋಗಿದ್ದಾರೆ

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಅಂಗಡಿಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ಮಹಿಳೆಯನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ಶಂಕುಸ್ಥಾಪನೆಯೇ ಅಭಿವೃದ್ಧಿಯೇ?- ಶಾಸಕ ಧೀರಜ್ ಮುನಿರಾಜ್ ಪ್ರೋಗ್ರೆಸ್ ಕಾರ್ಡ್ ನೀಡಿ- ಕಾಂಗ್ರೆಸ್ ಯುವ ಘಟಕ ಆಗ್ರಹ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…

4 hours ago

ದೊಡ್ಡಬಳ್ಳಾಪುರದಲ್ಲಿ ಹೈಟೆಕ್ ಮೀನುಗಾರರ ಮಾರುಕಟ್ಟೆ ಶೀಘ್ರ ಆರಂಭ- ಮಂಜುನಾಥ್ ಸುಣಗಾರ್

ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…

5 hours ago

ಸರ್ಕಾರದಿಂದ ಮಾವು ಖರೀದಿಗೆ ನೋಂದಣಿ ಆರಂಭ:‌ ಮಾವು ಬೆಳೆಗಾರರು ಕೂಡಲೇ ನೋಂದಾಯಿಸಿ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…

6 hours ago

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

1 day ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

2 days ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

2 days ago