ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಪಯಣ ಮಾಡಿದರು.
3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈ ಕುರಿತ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ದ್ರೌಪದಿ ಮುರ್ಮು ಅವರು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿಯಾಗಿದ್ದಾರೆ. 2009ರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.
“ಭಾರತೀಯ ವಾಯುಪಡೆಯ ಬಲಿಷ್ಠ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವುದು ನನಗೆ ಉಲ್ಲಾಸದಾಯಕ ಅನುಭವವಾಗಿತ್ತು. ಭಾರತದ ರಕ್ಷಣಾ ಸಾಮರ್ಥ್ಯವು ನೆಲ, ವಾಯು ಮತ್ತು ಸಮುದ್ರದ ಎಲ್ಲಾ ಗಡಿಗಳನ್ನು ಆವರಿಸಲು ಅಗಾಧವಾಗಿ ವಿಸ್ತರಿಸಿದೆ ಎಂಬುದು ಹೆಮ್ಮೆಯ ವಿಷಯ ಎಂದು ಬರೆದಿದ್ದಾರೆ.
ರಾಷ್ಟ್ರಪತಿಯವರು ಬ್ರಹ್ಮಪುತ್ರ ಮತ್ತು ತೇಜ್ಪುರ ಕಣಿವೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸಿದರು. 106 ಸ್ಕ್ವಾಡ್ರನ್ನ ಕಮಾಂಡಿಂಗ್ ಆಫೀಸರ್ ಜಿಪಿ ಕ್ಯಾಪ್ಟನ್ ನವೀನ್ ಕುಮಾರ್ ಅವರು ವಿಮಾನವನ್ನು ಹಾರಿಸಿದರು. ವಿಮಾನವು ಸಮುದ್ರ ಮಟ್ಟದಿಂದ ಸುಮಾರು ಎರಡು ಕಿಮೀ ಎತ್ತರದಲ್ಲಿ ಮತ್ತು ಗಂಟೆಗೆ ಸುಮಾರು 800 ಕಿಮೀ ವೇಗದಲ್ಲಿ ಹಾರಿತು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…