ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಪಯಣ ಮಾಡಿದರು.
3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈ ಕುರಿತ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ದ್ರೌಪದಿ ಮುರ್ಮು ಅವರು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿಯಾಗಿದ್ದಾರೆ. 2009ರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.
“ಭಾರತೀಯ ವಾಯುಪಡೆಯ ಬಲಿಷ್ಠ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವುದು ನನಗೆ ಉಲ್ಲಾಸದಾಯಕ ಅನುಭವವಾಗಿತ್ತು. ಭಾರತದ ರಕ್ಷಣಾ ಸಾಮರ್ಥ್ಯವು ನೆಲ, ವಾಯು ಮತ್ತು ಸಮುದ್ರದ ಎಲ್ಲಾ ಗಡಿಗಳನ್ನು ಆವರಿಸಲು ಅಗಾಧವಾಗಿ ವಿಸ್ತರಿಸಿದೆ ಎಂಬುದು ಹೆಮ್ಮೆಯ ವಿಷಯ ಎಂದು ಬರೆದಿದ್ದಾರೆ.
ರಾಷ್ಟ್ರಪತಿಯವರು ಬ್ರಹ್ಮಪುತ್ರ ಮತ್ತು ತೇಜ್ಪುರ ಕಣಿವೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸಿದರು. 106 ಸ್ಕ್ವಾಡ್ರನ್ನ ಕಮಾಂಡಿಂಗ್ ಆಫೀಸರ್ ಜಿಪಿ ಕ್ಯಾಪ್ಟನ್ ನವೀನ್ ಕುಮಾರ್ ಅವರು ವಿಮಾನವನ್ನು ಹಾರಿಸಿದರು. ವಿಮಾನವು ಸಮುದ್ರ ಮಟ್ಟದಿಂದ ಸುಮಾರು ಎರಡು ಕಿಮೀ ಎತ್ತರದಲ್ಲಿ ಮತ್ತು ಗಂಟೆಗೆ ಸುಮಾರು 800 ಕಿಮೀ ವೇಗದಲ್ಲಿ ಹಾರಿತು.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…