ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಪಯಣ ಮಾಡಿದರು.
3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈ ಕುರಿತ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ದ್ರೌಪದಿ ಮುರ್ಮು ಅವರು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿಯಾಗಿದ್ದಾರೆ. 2009ರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.
“ಭಾರತೀಯ ವಾಯುಪಡೆಯ ಬಲಿಷ್ಠ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವುದು ನನಗೆ ಉಲ್ಲಾಸದಾಯಕ ಅನುಭವವಾಗಿತ್ತು. ಭಾರತದ ರಕ್ಷಣಾ ಸಾಮರ್ಥ್ಯವು ನೆಲ, ವಾಯು ಮತ್ತು ಸಮುದ್ರದ ಎಲ್ಲಾ ಗಡಿಗಳನ್ನು ಆವರಿಸಲು ಅಗಾಧವಾಗಿ ವಿಸ್ತರಿಸಿದೆ ಎಂಬುದು ಹೆಮ್ಮೆಯ ವಿಷಯ ಎಂದು ಬರೆದಿದ್ದಾರೆ.
ರಾಷ್ಟ್ರಪತಿಯವರು ಬ್ರಹ್ಮಪುತ್ರ ಮತ್ತು ತೇಜ್ಪುರ ಕಣಿವೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸಿದರು. 106 ಸ್ಕ್ವಾಡ್ರನ್ನ ಕಮಾಂಡಿಂಗ್ ಆಫೀಸರ್ ಜಿಪಿ ಕ್ಯಾಪ್ಟನ್ ನವೀನ್ ಕುಮಾರ್ ಅವರು ವಿಮಾನವನ್ನು ಹಾರಿಸಿದರು. ವಿಮಾನವು ಸಮುದ್ರ ಮಟ್ಟದಿಂದ ಸುಮಾರು ಎರಡು ಕಿಮೀ ಎತ್ತರದಲ್ಲಿ ಮತ್ತು ಗಂಟೆಗೆ ಸುಮಾರು 800 ಕಿಮೀ ವೇಗದಲ್ಲಿ ಹಾರಿತು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…