ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಪಯಣ ಮಾಡಿದರು.
3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈ ಕುರಿತ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ದ್ರೌಪದಿ ಮುರ್ಮು ಅವರು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿಯಾಗಿದ್ದಾರೆ. 2009ರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.
“ಭಾರತೀಯ ವಾಯುಪಡೆಯ ಬಲಿಷ್ಠ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವುದು ನನಗೆ ಉಲ್ಲಾಸದಾಯಕ ಅನುಭವವಾಗಿತ್ತು. ಭಾರತದ ರಕ್ಷಣಾ ಸಾಮರ್ಥ್ಯವು ನೆಲ, ವಾಯು ಮತ್ತು ಸಮುದ್ರದ ಎಲ್ಲಾ ಗಡಿಗಳನ್ನು ಆವರಿಸಲು ಅಗಾಧವಾಗಿ ವಿಸ್ತರಿಸಿದೆ ಎಂಬುದು ಹೆಮ್ಮೆಯ ವಿಷಯ ಎಂದು ಬರೆದಿದ್ದಾರೆ.
ರಾಷ್ಟ್ರಪತಿಯವರು ಬ್ರಹ್ಮಪುತ್ರ ಮತ್ತು ತೇಜ್ಪುರ ಕಣಿವೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸಿದರು. 106 ಸ್ಕ್ವಾಡ್ರನ್ನ ಕಮಾಂಡಿಂಗ್ ಆಫೀಸರ್ ಜಿಪಿ ಕ್ಯಾಪ್ಟನ್ ನವೀನ್ ಕುಮಾರ್ ಅವರು ವಿಮಾನವನ್ನು ಹಾರಿಸಿದರು. ವಿಮಾನವು ಸಮುದ್ರ ಮಟ್ಟದಿಂದ ಸುಮಾರು ಎರಡು ಕಿಮೀ ಎತ್ತರದಲ್ಲಿ ಮತ್ತು ಗಂಟೆಗೆ ಸುಮಾರು 800 ಕಿಮೀ ವೇಗದಲ್ಲಿ ಹಾರಿತು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…