ಕೋಲಾರ: ತಾಲೂಕಿನ ಸುಗಟೂರಿನ ಸಬರಮತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಭಾನುವಾರ 1995-96 ನೇ ಸಾಲಿನ ವಿಧ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನದ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು ಕಾರ್ಯಕ್ರಮದ ಅಂಗವಾಗಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು ಇದಕ್ಕೂ ಮುನ್ನ ಶಿಕ್ಷಕರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಮೆರವಣಿಗೆ ಮೂಲಕ ಹಳೆ ವಿಧ್ಯಾರ್ಥಿಗಳು ವೇದಿಕೆಗೆ ಕರೆತರಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕ ಕೆ.ವಿ.ರಾಜಣ್ಣ ಮಾತನಾಡಿ ಈ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ತೆರಳಿದ್ದಾರೆ. ಆದರೆ ಎಲ್ಲಾ ವಿದ್ಯಾರ್ಥಿಗಳು ಸುಸಂಸ್ಕೃತ ವಿದ್ಯಾರ್ಥಿಗಳಾಗಿರುವುದು ಶಿಕ್ಷಕರಾದ ನಮಗೆ ಹೆಮ್ಮೆ ವಿಷಯವಾಗಿದೆ ಎಲ್ಲಿಯಾದರೂ ಸಿಕ್ಕಾಗ ನಮ್ಮ ಶಿಷ್ಯರ ಪಡೆ ಅಂತ ಹೆಮ್ಮೆಯಿಂದ ಹೇಳಬಹುದಾಗಿದೆ ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ ಇದೇ ಅವರು ಓದಿದ ಶಾಲೆಗೆ ನೀಡುವ ಗೌರವವಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಬಿ.ವಿ ವೆಂಕಟೇಶಪ್ಪ ಮಾತನಾಡಿ ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ವಿಧ್ಯಾರ್ಥಿಗಳಲ್ಲಿ ಇದೆ ಅವರಿಗೆಲ್ಲ ಬದುಕಿನ ಪ್ರಮುಖ ಘಟಗಳಲ್ಲಂತೂ ಮಾರ್ಗದರ್ಶಕರಾಗಿ ಗುರುವಿನ ಸಹಾಯ ಮುಖ್ಯವಾಗಿದೆ ಜೀವನದಲ್ಲಿ ಎಷ್ಟೇ ಮುಂದುವರಿದರೂ ಅದರ ಹಿಂದೆ ಗುರುವಿನ ಪಾತ್ರ ಇದ್ದೇ ಇರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿ ಕಡಗಟ್ಟೂರು ವಿಜಯಕುಮಾರ್ ಮಾತನಾಡಿ ಬಾಲ್ಯದಲ್ಲಿ ತುಂಟತನ, ಅಜ್ಞಾನ, ಅಶಿಸ್ತಿನಿಂದ ಇರುವ ಮಕ್ಕಳನ್ನು ಒಂದು ಹತೋಟಿಗೆ ತಂದು ವಿದ್ಯೆ ಕಲಿಸುವ ಎಲ್ಲ ಗುರುಗಳಿಗೂ ನಮನಗಳನ್ನು ಸಲ್ಲಿಸಿದರು ಗುರುಗಳಿಂದ ಬೆತ್ತದ ಏಟು ಬಿದ್ದಿದ್ದರಿಂದ ಇವತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪಗೊಂಡಿದ್ದೇವೆ ಪಾಠ ಕಲಿಸಿ ಜೀವನದ ಮೌಲ್ಯ ಕಲಿಸಿಕೊಟ್ಟ ಗುರುಗಳನ್ನು ಸ್ಮರಿಸಿ ಗುರುವಂದನೆ ಸಲ್ಲಿಸುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸಬರಮತಿ ಶಾಲೆಯ ಶಿಕ್ಷಕರಾದ ಬಾಲಕೃಷ್ಣ, ಚೌಡರೆಡ್ಡಿ, ಜಗದೀಶ್, ಗೋ.ನಾ ಸ್ವಾಮಿ, ನಾರಾಯಣಸ್ವಾಮಿ, ಮೋಹನ್ ಹಳೆ ವಿಧ್ಯಾರ್ಥಿಗಳಾದ ಚಂದ್ರಶೇಖರ್, ರವಿಚಂದ್ರರೆಡ್ಡಿ, ಜಗದೀಶ್, ನಂದೀಶ್, ನಾರಾಯಣಸ್ವಾಮಿ, ಕೃಷ್ಣಕುಮಾರಿ, ಶ್ರೀದೇವಿ, ಮಂಜುಳ ಮುಂತಾದವರು ಇದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…