ಕೋಲಾರ: ತಾಲೂಕಿನ ಸುಗಟೂರು ಪ್ರಾಥಮಿಕ ಕೃಷಿ ಸಹಕಾರ ಸಂಘದ 2025-30ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಂಕತಟ್ಟಿ ಎ.ಸಿ ಭಾಸ್ಕರ್ ಬಾಬು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ್ ಬಾಬು ಉಪಾಧ್ಯಕ್ಷ ಸ್ಥಾನಕ್ಕೆ ವಿಜಯಕುಮಾರ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಸಹಕಾರ ಇಲಾಖೆಯ ವೆಂಕಟೇಶ್ ಬಾಬು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು ಸೊಸೈಟಿ ಸಿಇಒ ಪುಟ್ಟರಾಜು ಸಿಬ್ಬಂದಿ ಇದ್ದರು.
ನೂತನ ಅಧ್ಯಕ್ಷ ಎ.ಸಿ ಭಾಸ್ಕರ್ ಬಾಬು ಮಾತನಾಡಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರ ಮಾರ್ಗದರ್ಶನದ ಜೊತೆಗೆ ಸಂಘದ ಎಲ್ಲಾ ನಿರ್ದೇಶಕರು ಸಹಕಾರದಿಂದ ಸೊಸೈಟಿಗೆ ಸತತವಾಗಿ ಎರಡನೇ ಬಾರಿಗೆ ಅಧ್ಯಕ್ಷನಾಗಿದ್ದು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಮುಂದೆ ಜಿಲ್ಲೆಯಲ್ಲಿ ಮಾದರಿ ಸಂಘವನ್ನಾಗಿ ಎಲ್ಲರ ಸಹಕಾರ ಮಾರ್ಗದರ್ಶನದಲ್ಲಿ ಮುನ್ನಡೆಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೆಪಿಸಿಸಿ ಸದಸ್ಯ ಸಂಜಯ್ ರೆಡ್ಡಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಚಂಜಿಮಲೆ ರಮೇಶ್, ವೆಲಗಲಬುರೆ ಶಶಿಧರ್, ಬೊಮ್ಮಸಂದ್ರ ಕೃಷೇಗೌಡ, ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಮುಖಂಡರಾದ ಶೆಟ್ಟಿಮಾದಮಂಗಲ ಮಂಜುನಾಥ್, ಮುಳ್ಳಹಳ್ಳಿ ಚಂದ್ರೇಗೌಡ, ಜನಘಟ್ಟ ಸತೀಶ್, ಸುಗಟೂರು ರವಿ, ಎಂ.ಕೆ ಮಂಜುನಾಥ್, ತುರಾಂಡಹಳ್ಳಿ ರವಿ ಅಭಿನಂದನೆ ಸಲ್ಲಿಸಿದರು
ಈ ಸಂದರ್ಭದಲ್ಲಿ ನಿರ್ದೇಶಕರಾದ ಟಿ.ವಿ ಕೃಷ್ಣಪ್ಪ, ಎಂ.ಎನ್ ಶಂಕರರೆಡ್ಡಿ, ಎ.ಎನ್ ಹನುಮೇಗೌಡ, ಗೋಪಾಲಕೃಷ್ಣ, ಶ್ಯಾಮಲ, ಸವಿತಾ.ಎನ್ ಶೆಟ್ಟಿ, ಮುನಿವೆಂಕಟಪ್ಪ, ರಮೇಶ್ ಬಾಬು, ವೆಂಕಟರಾಮರೆಡ್ಡಿ, ಡಿ.ಗೋಪಾಲಪ್ಪ, ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…