ಕೋಲಾರ: ತಾಲೂಕಿನ ಸುಗಟೂರು ಪ್ರಾಥಮಿಕ ಕೃಷಿ ಸಹಕಾರ ಸಂಘದ 2025-30ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಂಕತಟ್ಟಿ ಎ.ಸಿ ಭಾಸ್ಕರ್ ಬಾಬು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ್ ಬಾಬು ಉಪಾಧ್ಯಕ್ಷ ಸ್ಥಾನಕ್ಕೆ ವಿಜಯಕುಮಾರ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಸಹಕಾರ ಇಲಾಖೆಯ ವೆಂಕಟೇಶ್ ಬಾಬು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು ಸೊಸೈಟಿ ಸಿಇಒ ಪುಟ್ಟರಾಜು ಸಿಬ್ಬಂದಿ ಇದ್ದರು.
ನೂತನ ಅಧ್ಯಕ್ಷ ಎ.ಸಿ ಭಾಸ್ಕರ್ ಬಾಬು ಮಾತನಾಡಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರ ಮಾರ್ಗದರ್ಶನದ ಜೊತೆಗೆ ಸಂಘದ ಎಲ್ಲಾ ನಿರ್ದೇಶಕರು ಸಹಕಾರದಿಂದ ಸೊಸೈಟಿಗೆ ಸತತವಾಗಿ ಎರಡನೇ ಬಾರಿಗೆ ಅಧ್ಯಕ್ಷನಾಗಿದ್ದು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಮುಂದೆ ಜಿಲ್ಲೆಯಲ್ಲಿ ಮಾದರಿ ಸಂಘವನ್ನಾಗಿ ಎಲ್ಲರ ಸಹಕಾರ ಮಾರ್ಗದರ್ಶನದಲ್ಲಿ ಮುನ್ನಡೆಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೆಪಿಸಿಸಿ ಸದಸ್ಯ ಸಂಜಯ್ ರೆಡ್ಡಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಚಂಜಿಮಲೆ ರಮೇಶ್, ವೆಲಗಲಬುರೆ ಶಶಿಧರ್, ಬೊಮ್ಮಸಂದ್ರ ಕೃಷೇಗೌಡ, ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಮುಖಂಡರಾದ ಶೆಟ್ಟಿಮಾದಮಂಗಲ ಮಂಜುನಾಥ್, ಮುಳ್ಳಹಳ್ಳಿ ಚಂದ್ರೇಗೌಡ, ಜನಘಟ್ಟ ಸತೀಶ್, ಸುಗಟೂರು ರವಿ, ಎಂ.ಕೆ ಮಂಜುನಾಥ್, ತುರಾಂಡಹಳ್ಳಿ ರವಿ ಅಭಿನಂದನೆ ಸಲ್ಲಿಸಿದರು
ಈ ಸಂದರ್ಭದಲ್ಲಿ ನಿರ್ದೇಶಕರಾದ ಟಿ.ವಿ ಕೃಷ್ಣಪ್ಪ, ಎಂ.ಎನ್ ಶಂಕರರೆಡ್ಡಿ, ಎ.ಎನ್ ಹನುಮೇಗೌಡ, ಗೋಪಾಲಕೃಷ್ಣ, ಶ್ಯಾಮಲ, ಸವಿತಾ.ಎನ್ ಶೆಟ್ಟಿ, ಮುನಿವೆಂಕಟಪ್ಪ, ರಮೇಶ್ ಬಾಬು, ವೆಂಕಟರಾಮರೆಡ್ಡಿ, ಡಿ.ಗೋಪಾಲಪ್ಪ, ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…