Categories: ಕೋಲಾರ

ಸುಗಟೂರು ಸೊಸೈಟಿಗೆ ಅಂಕತಟ್ಟಿ ಬಾಬು ಸತತ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಕೋಲಾರ: ತಾಲೂಕಿನ ಸುಗಟೂರು ಪ್ರಾಥಮಿಕ ಕೃಷಿ ಸಹಕಾರ ಸಂಘದ 2025-30ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಂಕತಟ್ಟಿ ಎ.ಸಿ ಭಾಸ್ಕರ್ ಬಾಬು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶನಿವಾರ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ್ ಬಾಬು ಉಪಾಧ್ಯಕ್ಷ ಸ್ಥಾನಕ್ಕೆ ವಿಜಯಕುಮಾರ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಸಹಕಾರ ಇಲಾಖೆಯ ವೆಂಕಟೇಶ್ ಬಾಬು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು ಸೊಸೈಟಿ ಸಿಇಒ ಪುಟ್ಟರಾಜು ಸಿಬ್ಬಂದಿ ಇದ್ದರು.

ನೂತನ ಅಧ್ಯಕ್ಷ ಎ.ಸಿ ಭಾಸ್ಕರ್ ಬಾಬು ಮಾತನಾಡಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರ ಮಾರ್ಗದರ್ಶನದ ಜೊತೆಗೆ ಸಂಘದ ಎಲ್ಲಾ ನಿರ್ದೇಶಕರು ಸಹಕಾರದಿಂದ ಸೊಸೈಟಿಗೆ ಸತತವಾಗಿ ಎರಡನೇ ಬಾರಿಗೆ ಅಧ್ಯಕ್ಷನಾಗಿದ್ದು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಮುಂದೆ ಜಿಲ್ಲೆಯಲ್ಲಿ ಮಾದರಿ ಸಂಘವನ್ನಾಗಿ ಎಲ್ಲರ ಸಹಕಾರ ಮಾರ್ಗದರ್ಶನದಲ್ಲಿ ಮುನ್ನಡೆಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೆಪಿಸಿಸಿ ಸದಸ್ಯ ಸಂಜಯ್ ರೆಡ್ಡಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಚಂಜಿಮಲೆ ರಮೇಶ್, ವೆಲಗಲಬುರೆ ಶಶಿಧರ್, ಬೊಮ್ಮಸಂದ್ರ ಕೃಷೇಗೌಡ, ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಮುಖಂಡರಾದ ಶೆಟ್ಟಿಮಾದಮಂಗಲ ಮಂಜುನಾಥ್, ಮುಳ್ಳಹಳ್ಳಿ ಚಂದ್ರೇಗೌಡ, ಜನಘಟ್ಟ ಸತೀಶ್, ಸುಗಟೂರು ರವಿ, ಎಂ.ಕೆ ಮಂಜುನಾಥ್, ತುರಾಂಡಹಳ್ಳಿ ರವಿ ಅಭಿನಂದನೆ ಸಲ್ಲಿಸಿದರು

ಈ ಸಂದರ್ಭದಲ್ಲಿ ನಿರ್ದೇಶಕರಾದ ಟಿ.ವಿ ಕೃಷ್ಣಪ್ಪ, ಎಂ.ಎನ್ ಶಂಕರರೆಡ್ಡಿ, ಎ.ಎನ್ ಹನುಮೇಗೌಡ, ಗೋಪಾಲಕೃಷ್ಣ, ಶ್ಯಾಮಲ, ಸವಿತಾ.ಎನ್ ಶೆಟ್ಟಿ, ಮುನಿವೆಂಕಟಪ್ಪ, ರಮೇಶ್ ಬಾಬು, ವೆಂಕಟರಾಮರೆಡ್ಡಿ, ಡಿ.ಗೋಪಾಲಪ್ಪ, ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

6 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

8 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

8 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

8 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

10 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

14 hours ago