Categories: ಕೋಲಾರ

ಸುಗಟೂರು ಸೊಸೈಟಿಗೆ ಅಂಕತಟ್ಟಿ ಬಾಬು ಸತತ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಕೋಲಾರ: ತಾಲೂಕಿನ ಸುಗಟೂರು ಪ್ರಾಥಮಿಕ ಕೃಷಿ ಸಹಕಾರ ಸಂಘದ 2025-30ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಂಕತಟ್ಟಿ ಎ.ಸಿ ಭಾಸ್ಕರ್ ಬಾಬು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶನಿವಾರ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ್ ಬಾಬು ಉಪಾಧ್ಯಕ್ಷ ಸ್ಥಾನಕ್ಕೆ ವಿಜಯಕುಮಾರ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಸಹಕಾರ ಇಲಾಖೆಯ ವೆಂಕಟೇಶ್ ಬಾಬು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು ಸೊಸೈಟಿ ಸಿಇಒ ಪುಟ್ಟರಾಜು ಸಿಬ್ಬಂದಿ ಇದ್ದರು.

ನೂತನ ಅಧ್ಯಕ್ಷ ಎ.ಸಿ ಭಾಸ್ಕರ್ ಬಾಬು ಮಾತನಾಡಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರ ಮಾರ್ಗದರ್ಶನದ ಜೊತೆಗೆ ಸಂಘದ ಎಲ್ಲಾ ನಿರ್ದೇಶಕರು ಸಹಕಾರದಿಂದ ಸೊಸೈಟಿಗೆ ಸತತವಾಗಿ ಎರಡನೇ ಬಾರಿಗೆ ಅಧ್ಯಕ್ಷನಾಗಿದ್ದು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಮುಂದೆ ಜಿಲ್ಲೆಯಲ್ಲಿ ಮಾದರಿ ಸಂಘವನ್ನಾಗಿ ಎಲ್ಲರ ಸಹಕಾರ ಮಾರ್ಗದರ್ಶನದಲ್ಲಿ ಮುನ್ನಡೆಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೆಪಿಸಿಸಿ ಸದಸ್ಯ ಸಂಜಯ್ ರೆಡ್ಡಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಚಂಜಿಮಲೆ ರಮೇಶ್, ವೆಲಗಲಬುರೆ ಶಶಿಧರ್, ಬೊಮ್ಮಸಂದ್ರ ಕೃಷೇಗೌಡ, ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಮುಖಂಡರಾದ ಶೆಟ್ಟಿಮಾದಮಂಗಲ ಮಂಜುನಾಥ್, ಮುಳ್ಳಹಳ್ಳಿ ಚಂದ್ರೇಗೌಡ, ಜನಘಟ್ಟ ಸತೀಶ್, ಸುಗಟೂರು ರವಿ, ಎಂ.ಕೆ ಮಂಜುನಾಥ್, ತುರಾಂಡಹಳ್ಳಿ ರವಿ ಅಭಿನಂದನೆ ಸಲ್ಲಿಸಿದರು

ಈ ಸಂದರ್ಭದಲ್ಲಿ ನಿರ್ದೇಶಕರಾದ ಟಿ.ವಿ ಕೃಷ್ಣಪ್ಪ, ಎಂ.ಎನ್ ಶಂಕರರೆಡ್ಡಿ, ಎ.ಎನ್ ಹನುಮೇಗೌಡ, ಗೋಪಾಲಕೃಷ್ಣ, ಶ್ಯಾಮಲ, ಸವಿತಾ.ಎನ್ ಶೆಟ್ಟಿ, ಮುನಿವೆಂಕಟಪ್ಪ, ರಮೇಶ್ ಬಾಬು, ವೆಂಕಟರಾಮರೆಡ್ಡಿ, ಡಿ.ಗೋಪಾಲಪ್ಪ, ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

18 minutes ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 hour ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

7 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

19 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

19 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

20 hours ago