ಕೋಲಾರ: ರೈತರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಘಗಳು ಸಹಕಾರಿಯಾಗಿದ್ದು ರೈತರು ಹೆಚ್ಚಿನ ಠೇವಣಿ ಇಟ್ಟರೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ನೀಡಲು ಸಾಧ್ಯವಾಗುತ್ತದೆ ಎಂದು ಸುಗಟೂರು ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಅಂಕತಟ್ಟಿ ಎ.ಸಿ ಭಾಸ್ಕರ್ ಮನವಿ ಮಾಡಿದರು.
ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶನಿವಾರ ನಡೆದ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್ ಸಹಕಾರ ಸಂಘಗಳ ಮೂಲಕ ಆರ್ಥಿಕ ನೆರವು ಕಲ್ಪಿಸುತ್ತಿದೆ. ಆದರೆ, ಜನರು ಸೌಲಭ್ಯ ಪಡೆದುಕೊಂಡು ತಮ್ಮ ಉಳಿತಾಯದ ಹಣವನ್ನು ವಾಣಿಜ್ಯ ಬ್ಯಾಂಕ್ಗಳಲ್ಲಿ ಇಟ್ಟಿದ್ದಾರೆ ಸಹಕಾರಿ ವ್ಯವಸ್ಥೆಯ ಉಳಿವಿಗಾಗಿ ಸಹಕಾರಿ ಬ್ಯಾಂಕ್ ಗಳಲ್ಲಿ ಠೇವಣಿ ಇಡುವಂತೆ ಮನವಿ ಮಾಡಿದರು.
ನಾಲ್ಕು ವರ್ಷಗಳ ಹಿಂದೆ ರೈತರಿಗೆ ಒಂದು ಎಕರೆಗೆ 50 ಸಾವಿರ ಶೂನ್ಯ ಬಡ್ಡಿಯಲ್ಲಿ ನೀಡುತ್ತಿರುವ ಸಾಲ ಇಂದಿನ ಬೆಲೆ ಏರಿಕೆ ಕಾಲದಲ್ಲಿ ಯಾವುದಕ್ಕೂ ಸಾಕಾಗುವುದಿಲ್ಲ ಎಕರೆಗೆ ಶೂನ್ಯ ಬಡ್ಡಿಯಲ್ಲಿ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಹೊಸಬರಿಗೆ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ಮುಕ್ತವಾಗಿ ಹೊಸ ಷೇರುದಾರರನ್ನು ಸಂಘಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ರೈತರು ಹೆಚ್ಚಿನ ಸದಸ್ಯರು ಆಗುವಂತೆ ಮನವಿ ಮಾಡಿದರು,
ರೇಷ್ಮೆ ಬೆಳೆಗಾರರ ಸಹಕಾರ ಸಂಘದ ಮೂಲಕ ವಿವಿಧ ಕಂಪನಿಗಳ ಮೂಲಕ 52 ಲಕ್ಷದಷ್ಟು ಗೊಬ್ಬರ ಮಾರಾಟ ಮಾಡಲಾಗಿದೆ ಕೆಸಿಸಿ ಸಾಲವಾಗಿ 540 ರೈತರಿಗೆ 7 ಕೋಟಿ, ರೇಷ್ಮೆ ಹುಳುಮನೆಗೆ 11 ರೈತರಿಗೆ 79.70 ಲಕ್ಷ ಜೊತೆಗೆ 372 ಸ್ತ್ರೀಶಕ್ತಿ ಸಂಘಗಳಿಗೆ 18.60 ಕೋಟಿ ವ್ಯವಹರಿಸಲಾಗಿದೆ ಇದರಲ್ಲಿ 6.50 ಕೋಟಿ ವಸೂಲಿಯಾಗಿದ್ದು ಉಳಿದ ಹಣವನ್ನು ಪಾವತಿಸಲು ಮನವಿ ಮಾಡಿದರು,
ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ರುಕ್ಕಮ್ಮ, ನಿರ್ದೇಶಕರಾದ ವೆಂಕಟರಾಮರೆಡ್ಡಿ, ಅಮರನಾರಾಯಣಸ್ವಾಮಿ, ವೆಂಕಟರಾಮಪ್ಪ, ಎಂ.ಎಸ್.ರಮಣಾರೆಡ್ಡಿ, ಡಿ.ಗೋಪಾಲಪ್ಪ, ವೆಂಕಟಮ್ಮ, ಸವಿತಾ ಎನ್. ಶೆಟ್ಟಿ, ವೃತ್ತಿಪರ ನಿರ್ದೇಶಕ ಎ.ಎಂ.ಹನುಮೇಗೌಡ, ಸೈಯದ್ ಸಿರಾಜ್. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಪುಟ್ಟರಾಜು, ಹಿರಿಯ ಮಾರಾಟ ಗುಮಾಸ್ತರಾದ ಎಸ್.ವಿ.ರವಿಚಂದ್ರ,ಎಸ್. ನಾಗೇಶ್, ಆರ್. ಸುಶ್ಮಿತ, ಮಹೀದ್ದುಲ್ಲಾ ಷರೀಫ್ ಷೇರುದಾರರಾದ ಚಂದ್ರೇಗೌಡ, ಟಿ.ಎಂ.ವೆಂಕಟೇಶ್, ಟಿ.ಎನ್.ರವಿ, ಗೋಪಾಲಗೌಡ, ವಿ.ನಾರಾಯಣರೆಡ್ಡಿ, ನಾಗಪ್ಪ, ರಾಘವೇಂದ್ರ ಮುಂತಾದವರು ಇದ್ದರು
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…