Categories: ಕೋಲಾರ

ಸುಗಟೂರು ಸೊಸೈಟಿಗೆ 12.31 ಲಕ್ಷ ನಿವ್ವಳ ಲಾಭ:ಸಹಕಾರಿ ಬ್ಯಾಂಕುಗಳಲ್ಲಿಯೇ ಠೇವಣಿಗೆ ಭಾಸ್ಕರ್ ಮನವಿ

ಕೋಲಾರ: ರೈತರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಘಗಳು ಸಹಕಾರಿಯಾಗಿದ್ದು ರೈತರು ಹೆಚ್ಚಿನ ಠೇವಣಿ ಇಟ್ಟರೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ನೀಡಲು ಸಾಧ್ಯವಾಗುತ್ತದೆ ಎಂದು ಸುಗಟೂರು ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಅಂಕತಟ್ಟಿ ಎ.ಸಿ ಭಾಸ್ಕರ್ ಮನವಿ ಮಾಡಿದರು.

ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶನಿವಾರ ನಡೆದ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್‌ ಸಹಕಾರ ಸಂಘಗಳ ಮೂಲಕ ಆರ್ಥಿಕ ನೆರವು ಕಲ್ಪಿಸುತ್ತಿದೆ. ಆದರೆ, ಜನರು ಸೌಲಭ್ಯ ಪಡೆದುಕೊಂಡು ತಮ್ಮ ಉಳಿತಾಯದ ಹಣವನ್ನು ವಾಣಿಜ್ಯ ಬ್ಯಾಂಕ್‌ಗಳಲ್ಲಿ ಇಟ್ಟಿದ್ದಾರೆ ಸಹಕಾರಿ ವ್ಯವಸ್ಥೆಯ ಉಳಿವಿಗಾಗಿ ಸಹಕಾರಿ ಬ್ಯಾಂಕ್ ಗಳಲ್ಲಿ ಠೇವಣಿ ಇಡುವಂತೆ ಮನವಿ ಮಾಡಿದರು.

ನಾಲ್ಕು ವರ್ಷಗಳ ಹಿಂದೆ ರೈತರಿಗೆ ಒಂದು ಎಕರೆಗೆ 50 ಸಾವಿರ ಶೂನ್ಯ ಬಡ್ಡಿಯಲ್ಲಿ ನೀಡುತ್ತಿರುವ ಸಾಲ ಇಂದಿನ ಬೆಲೆ ಏರಿಕೆ ಕಾಲದಲ್ಲಿ ಯಾವುದಕ್ಕೂ ಸಾಕಾಗುವುದಿಲ್ಲ ಎಕರೆಗೆ ಶೂನ್ಯ ಬಡ್ಡಿಯಲ್ಲಿ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಹೊಸಬರಿಗೆ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ಮುಕ್ತವಾಗಿ ಹೊಸ ಷೇರುದಾರರನ್ನು ಸಂಘಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ರೈತರು ಹೆಚ್ಚಿನ ಸದಸ್ಯರು ಆಗುವಂತೆ ಮನವಿ ಮಾಡಿದರು,

ರೇಷ್ಮೆ ಬೆಳೆಗಾರರ ಸಹಕಾರ ಸಂಘದ ಮೂಲಕ ವಿವಿಧ ಕಂಪನಿಗಳ ಮೂಲಕ 52 ಲಕ್ಷದಷ್ಟು ಗೊಬ್ಬರ ಮಾರಾಟ ಮಾಡಲಾಗಿದೆ ಕೆಸಿಸಿ ಸಾಲವಾಗಿ 540 ರೈತರಿಗೆ 7 ಕೋಟಿ, ರೇಷ್ಮೆ ಹುಳುಮನೆಗೆ 11 ರೈತರಿಗೆ 79.70 ಲಕ್ಷ ಜೊತೆಗೆ 372 ಸ್ತ್ರೀಶಕ್ತಿ ಸಂಘಗಳಿಗೆ 18.60 ಕೋಟಿ ವ್ಯವಹರಿಸಲಾಗಿದೆ ಇದರಲ್ಲಿ 6.50 ಕೋಟಿ ವಸೂಲಿಯಾಗಿದ್ದು ಉಳಿದ ಹಣವನ್ನು ಪಾವತಿಸಲು ಮನವಿ ಮಾಡಿದರು,

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ರುಕ್ಕಮ್ಮ, ನಿರ್ದೇಶಕರಾದ ವೆಂಕಟರಾಮರೆಡ್ಡಿ, ಅಮರನಾರಾಯಣಸ್ವಾಮಿ, ವೆಂಕಟರಾಮಪ್ಪ, ಎಂ.ಎಸ್.ರಮಣಾರೆಡ್ಡಿ, ಡಿ.ಗೋಪಾಲಪ್ಪ, ವೆಂಕಟಮ್ಮ, ಸವಿತಾ ಎನ್. ಶೆಟ್ಟಿ, ವೃತ್ತಿಪರ ನಿರ್ದೇಶಕ ಎ.ಎಂ.ಹನುಮೇಗೌಡ, ಸೈಯದ್ ಸಿರಾಜ್. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಪುಟ್ಟರಾಜು, ಹಿರಿಯ ಮಾರಾಟ ಗುಮಾಸ್ತರಾದ ಎಸ್.ವಿ.ರವಿಚಂದ್ರ,ಎಸ್. ನಾಗೇಶ್, ಆರ್. ಸುಶ್ಮಿತ, ಮಹೀದ್ದುಲ್ಲಾ ಷರೀಫ್ ಷೇರುದಾರರಾದ ಚಂದ್ರೇಗೌಡ, ಟಿ.ಎಂ.ವೆಂಕಟೇಶ್, ಟಿ.ಎನ್.ರವಿ, ಗೋಪಾಲಗೌಡ, ವಿ.ನಾರಾಯಣರೆಡ್ಡಿ, ನಾಗಪ್ಪ, ರಾಘವೇಂದ್ರ ಮುಂತಾದವರು ಇದ್ದರು

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

3 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

3 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

5 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

9 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

15 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago