Categories: ಕೋಲಾರ

ಸುಗಟೂರು ಸೊಸೈಟಿಗೆ 12.31 ಲಕ್ಷ ನಿವ್ವಳ ಲಾಭ:ಸಹಕಾರಿ ಬ್ಯಾಂಕುಗಳಲ್ಲಿಯೇ ಠೇವಣಿಗೆ ಭಾಸ್ಕರ್ ಮನವಿ

ಕೋಲಾರ: ರೈತರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಘಗಳು ಸಹಕಾರಿಯಾಗಿದ್ದು ರೈತರು ಹೆಚ್ಚಿನ ಠೇವಣಿ ಇಟ್ಟರೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ನೀಡಲು ಸಾಧ್ಯವಾಗುತ್ತದೆ ಎಂದು ಸುಗಟೂರು ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಅಂಕತಟ್ಟಿ ಎ.ಸಿ ಭಾಸ್ಕರ್ ಮನವಿ ಮಾಡಿದರು.

ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶನಿವಾರ ನಡೆದ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್‌ ಸಹಕಾರ ಸಂಘಗಳ ಮೂಲಕ ಆರ್ಥಿಕ ನೆರವು ಕಲ್ಪಿಸುತ್ತಿದೆ. ಆದರೆ, ಜನರು ಸೌಲಭ್ಯ ಪಡೆದುಕೊಂಡು ತಮ್ಮ ಉಳಿತಾಯದ ಹಣವನ್ನು ವಾಣಿಜ್ಯ ಬ್ಯಾಂಕ್‌ಗಳಲ್ಲಿ ಇಟ್ಟಿದ್ದಾರೆ ಸಹಕಾರಿ ವ್ಯವಸ್ಥೆಯ ಉಳಿವಿಗಾಗಿ ಸಹಕಾರಿ ಬ್ಯಾಂಕ್ ಗಳಲ್ಲಿ ಠೇವಣಿ ಇಡುವಂತೆ ಮನವಿ ಮಾಡಿದರು.

ನಾಲ್ಕು ವರ್ಷಗಳ ಹಿಂದೆ ರೈತರಿಗೆ ಒಂದು ಎಕರೆಗೆ 50 ಸಾವಿರ ಶೂನ್ಯ ಬಡ್ಡಿಯಲ್ಲಿ ನೀಡುತ್ತಿರುವ ಸಾಲ ಇಂದಿನ ಬೆಲೆ ಏರಿಕೆ ಕಾಲದಲ್ಲಿ ಯಾವುದಕ್ಕೂ ಸಾಕಾಗುವುದಿಲ್ಲ ಎಕರೆಗೆ ಶೂನ್ಯ ಬಡ್ಡಿಯಲ್ಲಿ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಹೊಸಬರಿಗೆ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ಮುಕ್ತವಾಗಿ ಹೊಸ ಷೇರುದಾರರನ್ನು ಸಂಘಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ರೈತರು ಹೆಚ್ಚಿನ ಸದಸ್ಯರು ಆಗುವಂತೆ ಮನವಿ ಮಾಡಿದರು,

ರೇಷ್ಮೆ ಬೆಳೆಗಾರರ ಸಹಕಾರ ಸಂಘದ ಮೂಲಕ ವಿವಿಧ ಕಂಪನಿಗಳ ಮೂಲಕ 52 ಲಕ್ಷದಷ್ಟು ಗೊಬ್ಬರ ಮಾರಾಟ ಮಾಡಲಾಗಿದೆ ಕೆಸಿಸಿ ಸಾಲವಾಗಿ 540 ರೈತರಿಗೆ 7 ಕೋಟಿ, ರೇಷ್ಮೆ ಹುಳುಮನೆಗೆ 11 ರೈತರಿಗೆ 79.70 ಲಕ್ಷ ಜೊತೆಗೆ 372 ಸ್ತ್ರೀಶಕ್ತಿ ಸಂಘಗಳಿಗೆ 18.60 ಕೋಟಿ ವ್ಯವಹರಿಸಲಾಗಿದೆ ಇದರಲ್ಲಿ 6.50 ಕೋಟಿ ವಸೂಲಿಯಾಗಿದ್ದು ಉಳಿದ ಹಣವನ್ನು ಪಾವತಿಸಲು ಮನವಿ ಮಾಡಿದರು,

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ರುಕ್ಕಮ್ಮ, ನಿರ್ದೇಶಕರಾದ ವೆಂಕಟರಾಮರೆಡ್ಡಿ, ಅಮರನಾರಾಯಣಸ್ವಾಮಿ, ವೆಂಕಟರಾಮಪ್ಪ, ಎಂ.ಎಸ್.ರಮಣಾರೆಡ್ಡಿ, ಡಿ.ಗೋಪಾಲಪ್ಪ, ವೆಂಕಟಮ್ಮ, ಸವಿತಾ ಎನ್. ಶೆಟ್ಟಿ, ವೃತ್ತಿಪರ ನಿರ್ದೇಶಕ ಎ.ಎಂ.ಹನುಮೇಗೌಡ, ಸೈಯದ್ ಸಿರಾಜ್. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಪುಟ್ಟರಾಜು, ಹಿರಿಯ ಮಾರಾಟ ಗುಮಾಸ್ತರಾದ ಎಸ್.ವಿ.ರವಿಚಂದ್ರ,ಎಸ್. ನಾಗೇಶ್, ಆರ್. ಸುಶ್ಮಿತ, ಮಹೀದ್ದುಲ್ಲಾ ಷರೀಫ್ ಷೇರುದಾರರಾದ ಚಂದ್ರೇಗೌಡ, ಟಿ.ಎಂ.ವೆಂಕಟೇಶ್, ಟಿ.ಎನ್.ರವಿ, ಗೋಪಾಲಗೌಡ, ವಿ.ನಾರಾಯಣರೆಡ್ಡಿ, ನಾಗಪ್ಪ, ರಾಘವೇಂದ್ರ ಮುಂತಾದವರು ಇದ್ದರು

Ramesh Babu

Journalist

Recent Posts

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

10 hours ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

14 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

2 days ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

2 days ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 days ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago