ಕೋಲಾರ: ರೈತರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಘಗಳು ಸಹಕಾರಿಯಾಗಿದ್ದು ರೈತರು ಹೆಚ್ಚಿನ ಠೇವಣಿ ಇಟ್ಟರೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ನೀಡಲು ಸಾಧ್ಯವಾಗುತ್ತದೆ ಎಂದು ಸುಗಟೂರು ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಅಂಕತಟ್ಟಿ ಎ.ಸಿ ಭಾಸ್ಕರ್ ಮನವಿ ಮಾಡಿದರು.
ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶನಿವಾರ ನಡೆದ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್ ಸಹಕಾರ ಸಂಘಗಳ ಮೂಲಕ ಆರ್ಥಿಕ ನೆರವು ಕಲ್ಪಿಸುತ್ತಿದೆ. ಆದರೆ, ಜನರು ಸೌಲಭ್ಯ ಪಡೆದುಕೊಂಡು ತಮ್ಮ ಉಳಿತಾಯದ ಹಣವನ್ನು ವಾಣಿಜ್ಯ ಬ್ಯಾಂಕ್ಗಳಲ್ಲಿ ಇಟ್ಟಿದ್ದಾರೆ ಸಹಕಾರಿ ವ್ಯವಸ್ಥೆಯ ಉಳಿವಿಗಾಗಿ ಸಹಕಾರಿ ಬ್ಯಾಂಕ್ ಗಳಲ್ಲಿ ಠೇವಣಿ ಇಡುವಂತೆ ಮನವಿ ಮಾಡಿದರು.
ನಾಲ್ಕು ವರ್ಷಗಳ ಹಿಂದೆ ರೈತರಿಗೆ ಒಂದು ಎಕರೆಗೆ 50 ಸಾವಿರ ಶೂನ್ಯ ಬಡ್ಡಿಯಲ್ಲಿ ನೀಡುತ್ತಿರುವ ಸಾಲ ಇಂದಿನ ಬೆಲೆ ಏರಿಕೆ ಕಾಲದಲ್ಲಿ ಯಾವುದಕ್ಕೂ ಸಾಕಾಗುವುದಿಲ್ಲ ಎಕರೆಗೆ ಶೂನ್ಯ ಬಡ್ಡಿಯಲ್ಲಿ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಹೊಸಬರಿಗೆ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ಮುಕ್ತವಾಗಿ ಹೊಸ ಷೇರುದಾರರನ್ನು ಸಂಘಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ರೈತರು ಹೆಚ್ಚಿನ ಸದಸ್ಯರು ಆಗುವಂತೆ ಮನವಿ ಮಾಡಿದರು,
ರೇಷ್ಮೆ ಬೆಳೆಗಾರರ ಸಹಕಾರ ಸಂಘದ ಮೂಲಕ ವಿವಿಧ ಕಂಪನಿಗಳ ಮೂಲಕ 52 ಲಕ್ಷದಷ್ಟು ಗೊಬ್ಬರ ಮಾರಾಟ ಮಾಡಲಾಗಿದೆ ಕೆಸಿಸಿ ಸಾಲವಾಗಿ 540 ರೈತರಿಗೆ 7 ಕೋಟಿ, ರೇಷ್ಮೆ ಹುಳುಮನೆಗೆ 11 ರೈತರಿಗೆ 79.70 ಲಕ್ಷ ಜೊತೆಗೆ 372 ಸ್ತ್ರೀಶಕ್ತಿ ಸಂಘಗಳಿಗೆ 18.60 ಕೋಟಿ ವ್ಯವಹರಿಸಲಾಗಿದೆ ಇದರಲ್ಲಿ 6.50 ಕೋಟಿ ವಸೂಲಿಯಾಗಿದ್ದು ಉಳಿದ ಹಣವನ್ನು ಪಾವತಿಸಲು ಮನವಿ ಮಾಡಿದರು,
ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ರುಕ್ಕಮ್ಮ, ನಿರ್ದೇಶಕರಾದ ವೆಂಕಟರಾಮರೆಡ್ಡಿ, ಅಮರನಾರಾಯಣಸ್ವಾಮಿ, ವೆಂಕಟರಾಮಪ್ಪ, ಎಂ.ಎಸ್.ರಮಣಾರೆಡ್ಡಿ, ಡಿ.ಗೋಪಾಲಪ್ಪ, ವೆಂಕಟಮ್ಮ, ಸವಿತಾ ಎನ್. ಶೆಟ್ಟಿ, ವೃತ್ತಿಪರ ನಿರ್ದೇಶಕ ಎ.ಎಂ.ಹನುಮೇಗೌಡ, ಸೈಯದ್ ಸಿರಾಜ್. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಪುಟ್ಟರಾಜು, ಹಿರಿಯ ಮಾರಾಟ ಗುಮಾಸ್ತರಾದ ಎಸ್.ವಿ.ರವಿಚಂದ್ರ,ಎಸ್. ನಾಗೇಶ್, ಆರ್. ಸುಶ್ಮಿತ, ಮಹೀದ್ದುಲ್ಲಾ ಷರೀಫ್ ಷೇರುದಾರರಾದ ಚಂದ್ರೇಗೌಡ, ಟಿ.ಎಂ.ವೆಂಕಟೇಶ್, ಟಿ.ಎನ್.ರವಿ, ಗೋಪಾಲಗೌಡ, ವಿ.ನಾರಾಯಣರೆಡ್ಡಿ, ನಾಗಪ್ಪ, ರಾಘವೇಂದ್ರ ಮುಂತಾದವರು ಇದ್ದರು
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…