Categories: ಕೋಲಾರ

ಸುಗಟೂರು ಸೊಸೈಟಿಗೆ 12.31 ಲಕ್ಷ ನಿವ್ವಳ ಲಾಭ:ಸಹಕಾರಿ ಬ್ಯಾಂಕುಗಳಲ್ಲಿಯೇ ಠೇವಣಿಗೆ ಭಾಸ್ಕರ್ ಮನವಿ

ಕೋಲಾರ: ರೈತರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಘಗಳು ಸಹಕಾರಿಯಾಗಿದ್ದು ರೈತರು ಹೆಚ್ಚಿನ ಠೇವಣಿ ಇಟ್ಟರೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ನೀಡಲು ಸಾಧ್ಯವಾಗುತ್ತದೆ ಎಂದು ಸುಗಟೂರು ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಅಂಕತಟ್ಟಿ ಎ.ಸಿ ಭಾಸ್ಕರ್ ಮನವಿ ಮಾಡಿದರು.

ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶನಿವಾರ ನಡೆದ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್‌ ಸಹಕಾರ ಸಂಘಗಳ ಮೂಲಕ ಆರ್ಥಿಕ ನೆರವು ಕಲ್ಪಿಸುತ್ತಿದೆ. ಆದರೆ, ಜನರು ಸೌಲಭ್ಯ ಪಡೆದುಕೊಂಡು ತಮ್ಮ ಉಳಿತಾಯದ ಹಣವನ್ನು ವಾಣಿಜ್ಯ ಬ್ಯಾಂಕ್‌ಗಳಲ್ಲಿ ಇಟ್ಟಿದ್ದಾರೆ ಸಹಕಾರಿ ವ್ಯವಸ್ಥೆಯ ಉಳಿವಿಗಾಗಿ ಸಹಕಾರಿ ಬ್ಯಾಂಕ್ ಗಳಲ್ಲಿ ಠೇವಣಿ ಇಡುವಂತೆ ಮನವಿ ಮಾಡಿದರು.

ನಾಲ್ಕು ವರ್ಷಗಳ ಹಿಂದೆ ರೈತರಿಗೆ ಒಂದು ಎಕರೆಗೆ 50 ಸಾವಿರ ಶೂನ್ಯ ಬಡ್ಡಿಯಲ್ಲಿ ನೀಡುತ್ತಿರುವ ಸಾಲ ಇಂದಿನ ಬೆಲೆ ಏರಿಕೆ ಕಾಲದಲ್ಲಿ ಯಾವುದಕ್ಕೂ ಸಾಕಾಗುವುದಿಲ್ಲ ಎಕರೆಗೆ ಶೂನ್ಯ ಬಡ್ಡಿಯಲ್ಲಿ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಹೊಸಬರಿಗೆ ಒಂದು ಲಕ್ಷ ನೀಡಲಾಗುತ್ತದೆ ಜೊತೆಗೆ ಡಿಸಿಸಿ ಬ್ಯಾಂಕ್ ವತಿಯಿಂದ ಹೆಚ್ಚಿನ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ಮುಕ್ತವಾಗಿ ಹೊಸ ಷೇರುದಾರರನ್ನು ಸಂಘಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ರೈತರು ಹೆಚ್ಚಿನ ಸದಸ್ಯರು ಆಗುವಂತೆ ಮನವಿ ಮಾಡಿದರು,

ರೇಷ್ಮೆ ಬೆಳೆಗಾರರ ಸಹಕಾರ ಸಂಘದ ಮೂಲಕ ವಿವಿಧ ಕಂಪನಿಗಳ ಮೂಲಕ 52 ಲಕ್ಷದಷ್ಟು ಗೊಬ್ಬರ ಮಾರಾಟ ಮಾಡಲಾಗಿದೆ ಕೆಸಿಸಿ ಸಾಲವಾಗಿ 540 ರೈತರಿಗೆ 7 ಕೋಟಿ, ರೇಷ್ಮೆ ಹುಳುಮನೆಗೆ 11 ರೈತರಿಗೆ 79.70 ಲಕ್ಷ ಜೊತೆಗೆ 372 ಸ್ತ್ರೀಶಕ್ತಿ ಸಂಘಗಳಿಗೆ 18.60 ಕೋಟಿ ವ್ಯವಹರಿಸಲಾಗಿದೆ ಇದರಲ್ಲಿ 6.50 ಕೋಟಿ ವಸೂಲಿಯಾಗಿದ್ದು ಉಳಿದ ಹಣವನ್ನು ಪಾವತಿಸಲು ಮನವಿ ಮಾಡಿದರು,

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ರುಕ್ಕಮ್ಮ, ನಿರ್ದೇಶಕರಾದ ವೆಂಕಟರಾಮರೆಡ್ಡಿ, ಅಮರನಾರಾಯಣಸ್ವಾಮಿ, ವೆಂಕಟರಾಮಪ್ಪ, ಎಂ.ಎಸ್.ರಮಣಾರೆಡ್ಡಿ, ಡಿ.ಗೋಪಾಲಪ್ಪ, ವೆಂಕಟಮ್ಮ, ಸವಿತಾ ಎನ್. ಶೆಟ್ಟಿ, ವೃತ್ತಿಪರ ನಿರ್ದೇಶಕ ಎ.ಎಂ.ಹನುಮೇಗೌಡ, ಸೈಯದ್ ಸಿರಾಜ್. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಪುಟ್ಟರಾಜು, ಹಿರಿಯ ಮಾರಾಟ ಗುಮಾಸ್ತರಾದ ಎಸ್.ವಿ.ರವಿಚಂದ್ರ,ಎಸ್. ನಾಗೇಶ್, ಆರ್. ಸುಶ್ಮಿತ, ಮಹೀದ್ದುಲ್ಲಾ ಷರೀಫ್ ಷೇರುದಾರರಾದ ಚಂದ್ರೇಗೌಡ, ಟಿ.ಎಂ.ವೆಂಕಟೇಶ್, ಟಿ.ಎನ್.ರವಿ, ಗೋಪಾಲಗೌಡ, ವಿ.ನಾರಾಯಣರೆಡ್ಡಿ, ನಾಗಪ್ಪ, ರಾಘವೇಂದ್ರ ಮುಂತಾದವರು ಇದ್ದರು

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

1 hour ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

4 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

15 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

17 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

17 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago